ರಾಜ್ಯಸಭೆ(ಸಂಗ್ರಹ ಚಿತ್ರ) 
ದೇಶ

ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆ

ಇತ್ತೀಚೆಗಷ್ಟೇ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನವದೆಹಲಿ: ಇತ್ತೀಚೆಗಷ್ಟೇ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಸದನದ ನಾಯಕ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗಳಿಗಾಗಿ ಸದನಕ್ಕೆ ಬಂದು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇಂದಿರಾ ಗಾಂಧಿಯವರ ಹೆಸರನ್ನು ತೆಗೆದುಕೊಳ್ಳದೆ ಗೋಯಲ್ ಅವರು, 'ತುರ್ತು ಪರಿಸ್ಥಿತಿ ವೇಳೆ ಮತ್ತು ಕಾಂಗ್ರೆಸ್ ನಾಯಕರು ಶಾಸನದ ಪ್ರತಿಯನ್ನು ಹರಿದು ಹಾಕಿದಾಗ ಭಾರತೀಯ ಪ್ರಜಾಪ್ರಭುತ್ವ ಅಪಾಯದಲ್ಲಿತ್ತು' ಎಂದು ಹೇಳಿದರು.

ಅವರ ಹೇಳಿಕೆಗೆ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು, 'ರಾಜ್ಯಸಭಾ ಸದಸ್ಯರಲ್ಲದ ನಾಯಕರನ್ನು ಸದನಕ್ಕೆ ಕರೆಯಬೇಕೆಂಬ ಬೇಡಿಕೆ ಖಂಡನೀಯ' ಎಂದರು.

ಖರ್ಗೆ ಅವರು, ವಿದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ನೆನಪಿಸಿಕೊಂಡರು. ಆದರೆ, ಆಡಳಿತಾರೂಢ ಪಕ್ಷದ ಸದಸ್ಯರು ಅದಕ್ಕೆ ಅಡ್ಡಿಪಡಿಸಿದವು. ಈ ಹಂತದಲ್ಲಿ ಸಭಾಪತಿ ಜಗದೀಪ್ ಧನಕರ್ ಅವರು ಸದನದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇಂಗ್ಲೆಂಡ್ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು, ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ಕ್ರೂರ ದಾಳಿಗೆ ಒಳಗಾಗಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆದಿದೆ. ಅಮೆರಿಕ ಮತ್ತು ಯುರೋಪ್‌ನಂತಹ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಇದನ್ನು ಗಮನಿಸುವಲ್ಲಿ ವಿಫಲವಾಗಿವೆ' ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT