ಪ್ರಕಾಶ್ ಸುರ್ವೆ ಮತ್ತು ಶೀತಲ್ ಮ್ಹಾತ್ರೆ 
ದೇಶ

ಶಿವಸೇನಾ ಶಾಸಕ, ಪಕ್ಷದ ನಾಯಕಿಯ 'ತಿರುಚಿದ' ವಿಡಿಯೋ ಪ್ರಕರಣ: ಎಸ್‌ಐಟಿಯಿಂದ ತನಿಖೆ

ಶಿವಸೇನಾ ಶಾಸಕ ಪ್ರಕಾಶ್ ಸುರ್ವೆ ಮತ್ತು ಪಕ್ಷದ ಉಪ ನಾಯಕಿ ಶೀತಲ್ ಮ್ಹಾತ್ರೆ ಅವರ ಮಾರ್ಫ್ ಮಾಡಲಾದ ವಿಡಿಯೋ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲಿದೆ...

ಮುಂಬೈ: ಶಿವಸೇನಾ ಶಾಸಕ ಪ್ರಕಾಶ್ ಸುರ್ವೆ ಮತ್ತು ಪಕ್ಷದ ಉಪ ನಾಯಕಿ ಶೀತಲ್ ಮ್ಹಾತ್ರೆ ಅವರ ಮಾರ್ಫ್ ಮಾಡಲಾದ ವಿಡಿಯೋ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲಿದೆ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜ್ ದೇಸಾಯಿ ಸೋಮವಾರ ತಿಳಿಸಿದ್ದಾರೆ.

ಈ ಸಂಬಂಧ ಉದ್ಧವ್ ಠಾಕ್ರೆ ಬಣದ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣ ಸಂಬಂಧ ಇದುವರೆಗೆ ಐವರನ್ನು ಬಂಧಿಸಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ದೇಸಾಯಿ, ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಎಸ್‌ಐಟಿಯ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಿವಸೇನೆ ಶಾಸಕರಾದ ಯಾಮಿನಿ ಜಾಧವ್ ಮತ್ತು ಮನೀಶಾ ಚೌಧರಿ ಅವರು, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಸ್ಥಳೀಯ ಸಂಸದ ಗೋಪಾಲ್ ಶೆಟ್ಟಿ ಅವರು ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮದ ವಿಡಿಯೋ ಮಾರ್ಫಿಂಗ್ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಶಿವಸೇನೆಯ(ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಾಮಾಜಿಕ ಮಾಧ್ಯಮ ರಾಜ್ಯ ಸಂಯೋಜಕ ವಿನಾಯಕ್ ದಾವರೆ(26) ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ದಾವರೆ ಫೇಸ್‌ಬುಕ್‌ನಲ್ಲಿ ಮಾರ್ಫ್ ಮಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದರೆ, ಇತರ ಮೂವರು ಅದನ್ನು ವೈರಲ್ ಮಾಡಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT