ದತ್ತಾತ್ರೇಯ ಹೊಸಬಾಳೆ 
ದೇಶ

ಭಾರತ ಈಗಾಗಲೇ ಹಿಂದೂ ರಾಷ್ಟ್ರ, ಅದನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ: ದತ್ತಾತ್ರೇಯ ಹೊಸಬಾಳೆ

ಭಾರತವು ಈಗಾಗಲೇ 'ಹಿಂದೂ ರಾಷ್ಟ್ರ'ವಾಗಿದ್ದು, ಇದು 'ಸಾಂಸ್ಕೃತಿಕ ಪರಿಕಲ್ಪನೆ' ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಇಲ್ಲಿ ಹೇಳಿದರು.

ಸಮಲ್ಖಾ (ಹರಿಯಾಣ): ಭಾರತವು ಈಗಾಗಲೇ 'ಹಿಂದೂ ರಾಷ್ಟ್ರ'ವಾಗಿದ್ದು, ಇದು 'ಸಾಂಸ್ಕೃತಿಕ ಪರಿಕಲ್ಪನೆ' ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಇಲ್ಲಿ ಹೇಳಿದರು.

ತಮ್ಮ ಹೇಳಿಕೆಯನ್ನು ವಿವರಿಸಿದ ಅವರು, ರಾಷ್ಟ್ರ ಮತ್ತು ರಾಜ್ಯ ಎರಡು ವಿಭಿನ್ನ ವಿಷಯಗಳು. ರಾಷ್ಟ್ರವು 'ಸಾಂಸ್ಕೃತಿಕ ಪರಿಕಲ್ಪನೆ' ಆಗಿದ್ದರೆ, ರಾಜ್ಯವು ಸಂವಿಧಾನದಿಂದ ಸ್ಥಾಪಿಸಲ್ಪಟ್ಟಿದೆ. ಅದು ರಾಜ್ಯ ಶಕ್ತಿ ಎಂದರು.

'ಹಿಂದೂ ರಾಷ್ಟ್ರದ ಬಗ್ಗೆ ನಾವು ಕಳೆದ 100 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಅದು ಸಾಂಸ್ಕೃತಿಕ ಪರಿಕಲ್ಪನೆ, ಸೈದ್ಧಾಂತಿಕವಲ್ಲ' ಎಂದು ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ರಾಷ್ಟ್ರವು ಒಂದು ಸಾಂಸ್ಕೃತಿಕ ಪರಿಕಲ್ಪನೆಯಾಗಿದೆ. ಭಾರತವು ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಅದನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT