ದತ್ತಾತ್ರೇಯ ಹೊಸಬಾಳೆ 
ದೇಶ

ಭಾರತ ಈಗಾಗಲೇ ಹಿಂದೂ ರಾಷ್ಟ್ರ, ಅದನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ: ದತ್ತಾತ್ರೇಯ ಹೊಸಬಾಳೆ

ಭಾರತವು ಈಗಾಗಲೇ 'ಹಿಂದೂ ರಾಷ್ಟ್ರ'ವಾಗಿದ್ದು, ಇದು 'ಸಾಂಸ್ಕೃತಿಕ ಪರಿಕಲ್ಪನೆ' ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಇಲ್ಲಿ ಹೇಳಿದರು.

ಸಮಲ್ಖಾ (ಹರಿಯಾಣ): ಭಾರತವು ಈಗಾಗಲೇ 'ಹಿಂದೂ ರಾಷ್ಟ್ರ'ವಾಗಿದ್ದು, ಇದು 'ಸಾಂಸ್ಕೃತಿಕ ಪರಿಕಲ್ಪನೆ' ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಇಲ್ಲಿ ಹೇಳಿದರು.

ತಮ್ಮ ಹೇಳಿಕೆಯನ್ನು ವಿವರಿಸಿದ ಅವರು, ರಾಷ್ಟ್ರ ಮತ್ತು ರಾಜ್ಯ ಎರಡು ವಿಭಿನ್ನ ವಿಷಯಗಳು. ರಾಷ್ಟ್ರವು 'ಸಾಂಸ್ಕೃತಿಕ ಪರಿಕಲ್ಪನೆ' ಆಗಿದ್ದರೆ, ರಾಜ್ಯವು ಸಂವಿಧಾನದಿಂದ ಸ್ಥಾಪಿಸಲ್ಪಟ್ಟಿದೆ. ಅದು ರಾಜ್ಯ ಶಕ್ತಿ ಎಂದರು.

'ಹಿಂದೂ ರಾಷ್ಟ್ರದ ಬಗ್ಗೆ ನಾವು ಕಳೆದ 100 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಅದು ಸಾಂಸ್ಕೃತಿಕ ಪರಿಕಲ್ಪನೆ, ಸೈದ್ಧಾಂತಿಕವಲ್ಲ' ಎಂದು ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ರಾಷ್ಟ್ರವು ಒಂದು ಸಾಂಸ್ಕೃತಿಕ ಪರಿಕಲ್ಪನೆಯಾಗಿದೆ. ಭಾರತವು ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಅದನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

SCROLL FOR NEXT