ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಪ್ರತಿಪಕ್ಷಗಳ ಸಂಸದರು ಲೋಕಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. 
ದೇಶ

ಲಂಡನ್'ನಲ್ಲಿ ರಾಹುಲ್ ಗಾಂಧಿ ಹೇಳಿಕೆ: ಸಂಸತ್ತಿನಲ್ಲಿ ಕೋಲಾಹಲ, ಮತ್ತೆ ಕಲಾಪ ಮುಂದೂಡಿಕೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟನ್‌ ಪ್ರವಾಸದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ನೀಡಿದ್ದ ಹೇಳಿಕೆಯು ಸಂಸತ್ತಿನಲ್ಲಿ ಮಂಗಳವಾರವೂ ಕೋಲಾಹಲ ಎಬ್ಬಿಸಿದ್ದು, ಇದರ ಪರಿಣಾಮ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು.

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟನ್‌ ಪ್ರವಾಸದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ನೀಡಿದ್ದ ಹೇಳಿಕೆಯು ಸಂಸತ್ತಿನಲ್ಲಿ ಮಂಗಳವಾರವೂ ಕೋಲಾಹಲ ಎಬ್ಬಿಸಿದ್ದು, ಇದರ ಪರಿಣಾಮ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಸದಸ್ಯರ ನಡುವೆ ಇದೇ ವಿಷಯವಾಗಿ ಗದ್ದಲವಾಗಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ಕಲ್ಪಿಸುತ್ತದ್ದಂತೆ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದವು. ಈ ನಡುವೆ ಬಿಜೆಪಿ ಸದಸ್ಯರು ರಾಹುಲ್‌ ಗಾಂಧಿ ಕ್ಷಮೆಯಾಚನೆ ಮಾಡಬೇಕು ಎಂದು ಪಟ್ಟು ಹಿಡಿದವು. ಇದರಿಂದ ಉಭಯ ಪಕ್ಷಗಳ ನಡುವೆ ವಾಕ್ಸಮರ ನಡೆದಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು.

ಬಜೆಟ್‌ ಅಧಿವೇಶನದ ಎರಡನೇ ಹಂತದ ಚರ್ಚೆ ಸೋಮವಾರ ಆರಂಭವಾಯಿತು. ರಾಹುಲ್‌ ಅವರ ಇತ್ತೀಚಿನ ಲಂಡನ್‌ ಭಾಷಣವು ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದರಿಂದ ಬಿಜೆಪಿ ಸದಸ್ಯರು ರಾಹುಲ್‌ ಕ್ಷಮೆಯಾಚನೆಗೆ ಪಟ್ಟು ಹಿಡಿದರು. ಇದರಿಂದ ಕಾಂಗ್ರೆಸ್‌ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಸದನವನ್ನು ಮಂಗಳವಾರ ಮುಂದೂಡಲಾಗಿತ್ತು,

ಇಂದು ಸದನ ಆರಂಭವಾಗುತ್ತಿದ್ದಂತೆ ಇದೇ ವಿಷಯವಾಗಿ ಉಭಯ ಪಕ್ಷಗಳು ಗದ್ದಲ ಮಾಡಿದ್ದರಿಂದ ಸದನವನ್ನು ಮತ್ತೆ ಮುಂದೂಡಲಾಯಿತು.

ದೇಶದ ಪ್ರಜಾಪ್ರಭುತ್ವವನ್ನು ವಿದೇಶಿ ನೆಲದಲ್ಲಿ ಅವಹೇಳನ ಮಾಡಿರುವ ರಾಹುಲ್‌ ಗಾಂಧಿ ದೇಶದ ಕ್ಷಮೆಯಾಚಿಸಬೇಕೆಂದು ಆಡಳಿತಾರೂಢ ಪಕ್ಷದ ನಾಯಕರು ಪಟ್ಟುಹಿಡಿದರೆ, ವಿದೇಶಗಳ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಈ ಹಿಂದೆ ನೀದಿದ್ದ ಹೇಳಿಕೆಯನ್ನು ಹಿಡಿದು ಸಮರ್ಥಿಸಿಕೊಂಡು, ಸರ್ಕಾರದ ವಿರುದ್ಧ ಪ್ರತಿದಾಳಿ ನಡೆಸಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT