ದತ್ತಾತ್ರೇಯ ಹೊಸಬಾಳೆ 
ದೇಶ

ರಾಹುಲ್ ಗಾಂಧಿ ಜವಾಬ್ದಾರಿಯಿಂದ ಮಾತನಾಡಬೇಕು: ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ

ರಾಹುಲ್ ಗಾಂಧಿ ಹೆಚ್ಚಿನ ಜವಾಬ್ದಾರಿಯಿಂದ ಮಾತನಾಡಬೇಕು, ಸಮಾಜದಲ್ಲಿ ಸಂಘದ ಅಸ್ವಿತ್ವದ ವಾಸ್ತವ ಸ್ಥಿತಿಯನ್ನು ಅವರು ನೋಡಬೇಕು ಎಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಹೇಳಿದ್ದಾರೆ.

ಹರಿಯಾಣ: ರಾಹುಲ್ ಗಾಂಧಿ ಹೆಚ್ಚಿನ ಜವಾಬ್ದಾರಿಯಿಂದ ಮಾತನಾಡಬೇಕು, ಸಮಾಜದಲ್ಲಿ ಸಂಘದ ಅಸ್ವಿತ್ವದ ವಾಸ್ತವ ಸ್ಥಿತಿಯನ್ನು ಅವರು ನೋಡಬೇಕು ಎಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಇತ್ತೀಚಿನ ತಮ್ಮ ಭಾಷಣದಲ್ಲಿ ಪದೇ ಪದೇ ಆರ್ ಎಸ್ ಎಸ್ ಗುರಿಯಾಗಿಸಿಕೊಂಡು ಮಾತನಾಡಿದ ನಂತರ ಹೊಸಬಾಳೆ ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಲಿಂಗ ವಿವಾಹದ ಬಗ್ಗೆ ಕೇಂದ್ರದ ನಿಲುವನ್ನು ಆರ್‌ಎಸ್‌ಎಸ್ ಒಪ್ಪುತ್ತದೆ. ಮದುವೆ ಎಂಬುದು ಬೇರೆ ಬೇರೆ  ಲಿಂಗದ ಇಬ್ಬರ ನಡುವೆ ಮಾತ್ರ ನಡೆಯಬಹುದು ಎಂದು ಅವರು ಹೇಳಿದ್ದಾರೆ. 

ಆರ್ ಎಸ್ ಎಸ್ ವಿರುದ್ಧ ರಾಹುಲ್  ಗಾಂಧಿಯವರ ಇತ್ತೀಚಿನ ಟೀಕೆ ಕುರಿತು ಮಾತನಾಡಿದ  ಹೊಸಬಾಳೆ,  ತಮ್ಮ ರಾಜಕೀಯ ಅಜೆಂಡಾಗಾಗಿ ಈ ರೀತಿ ಮಾಡುತ್ತಿರಬೇಕು. ಆದರೆ ಆರ್ ಎಸ್ ಎಸ್ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವುದಿಲ್ಲ ಮತ್ತು ಸಂಘದೊಂದಿಗೆ ಅವರಿಗೆ ಯಾವುದೇ ಸ್ಪರ್ಧೆ ಇಲ್ಲ ಎಂದು ಹೇಳಿದರು.

ರಾಜಕೀಯ ಪಕ್ಷದ ನಾಯಕರಾಗಿ, ಅವರು ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಬೇಕು ಮತ್ತು ಸಂಘದ ವಿಸ್ತರಣೆ ಮತ್ತು ಸಮಾಜದಲ್ಲಿ ಸ್ವೀಕಾರದ ವಾಸ್ತವವನ್ನು ನೋಡಬೇಕು ಎಂದು ಹರಿಯಾಣದ ಆರ್‌ಎಸ್‌ಎಸ್‌ನ 'ಅಖಿಲ ಭಾರತೀಯ ಪ್ರತಿನಿಧಿ ಸಭಾ' ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುಕೆಯಲ್ಲಿ ಗಾಂಧಿ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್ ನಾಯಕ, ಭಾರತವನ್ನು ಜೈಲಾಗಿ ಪರಿವರ್ತಿಸಿದವರಿಗೆ ದೇಶದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ ಎಂದು ಹೇಳಿದರು. ಮುಸ್ಲಿಂ ಬುದ್ಧಿಜೀವಿಗಳು ಮತ್ತು ಅವರ ಆಧ್ಯಾತ್ಮಿಕ ನಾಯಕರ ಆಹ್ವಾನದ ಮೇರೆಗೆ ಅವರನ್ನು  ಆರೆಸ್ಸೆಸ್ ನಾಯಕರು ಭೇಟಿ ಮಾಡುತ್ತಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಹೊಸಬಾಳೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT