ಮೋದಿಯ ಅನಿಮೇಟೆಡ್ ವೀಡಿಯೋ 
ದೇಶ

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಪ್ರಧಾನಿ ಮೋದಿಯ ಅನಿಮೇಟೆಡ್ ವೀಡಿಯೋ ಬಿಡುಗಡೆ

ಕೇಂದ್ರದ ಆಡಳಿತರೂಢ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಈಗಿನಿಂದಲೇ ಸಿದ್ಧತೆ ನಡೆಸುತ್ತಿದ್ದು, ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಅನಿಮೇಟೆಡ್ ವೀಡಿಯೋ ಬಿಡುಗಡೆ...

ನವದೆಹಲಿ: ಕೇಂದ್ರದ ಆಡಳಿತರೂಢ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಈಗಿನಿಂದಲೇ ಸಿದ್ಧತೆ ನಡೆಸುತ್ತಿದ್ದು, ಬುಧವಾರ ಪ್ರಧಾನಿ ನರೇಂದ್ರ ಮೋದಿಯವರ ಅನಿಮೇಟೆಡ್ ವೀಡಿಯೋ ಬಿಡುಗಡೆ ಮಾಡಿದೆ.

ಪ್ರಧಾನಿ ಮೋದಿ ಅವರು ಸಮಾಜದ ವಿವಿಧ ವರ್ಗಗಳಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಮುನ್ನಡೆಯುತ್ತಿದ್ದಾರೆ ಮತ್ತು ಭಾರತವನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು ದೃಢವಾದ ಹೆಜ್ಜೆಗಳನ್ನು ಹಾಕುತ್ತಿದ್ದಾರೆ ಎಂದು ತೋರಿಸುವ ಕಿರು ಅನಿಮೇಟೆಡ್ ವೀಡಿಯೊವನ್ನು ಭಾರತೀಯ ಜನತಾ ಪಕ್ಷವು ಬಿಡುಗಡೆ ಮಾಡಿದೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿಯಂತಹ ಕಾಂಗ್ರೆಸ್ ನಾಯಕರ ವಾಗ್ದಾಳಿಗಳ ನಡುವೆಯೇ ಬಿಜೆಪಿ,  ಮುಜೆ ಚಲ್ತೇ ಜಾನಾ ಹೈ(ನಾನು ನಡೆಯುತ್ತಲೇ ಇರುತ್ತೇನೆ) ಎಂಬ ಶೀರ್ಷಿಕೆಯ ನಾಲ್ಕು ನಿಮಿಷ ಮೂವತ್ತೆರಡು ಸೆಕೆಂಡಗಳ ವೀಡಿಯೋ ಬಿಡುಗಡೆ ಮಾಡಿದ್ದು, ಮೋದಿ ಗುಜರಾತ್‌ನ ಮುಖ್ಯಮಂತ್ರಿ ಹುದ್ದೆಯಿಂದ ಪ್ರಧಾನಿ ಹುದ್ದೆಯವರೆಗೆ ಸಾಗಿಬಂದ ಹಾದಿಯನ್ನು ತೋರಿಸಲಾಗಿದೆ.

ಮೋದಿ  ಪ್ರಧಾನಿ ಕುರ್ಚಿಯತ್ತ ಸಾಗುವ ಮೆಟ್ಟಿಲುಗಳ ಮೇಲೆ ನಡೆಯಲು ಪ್ರಾರಂಭಿಸಿದಾಗ, ಅವರನ್ನು ಸೋನಿಯಾ ಗಾಂಧಿ ಅವರು ‘ಮೌತ್ ಕಾ ಸೌದಾಗರ್’ ಎಂದು ಉಲ್ಲೇಖಿಸುತ್ತಾರೆ. ಎಲ್ಲಾ ದಾಳಿಗಳನ್ನು ವಿರೋಧಿಸಿ, ಮೋದಿ ಅವರು ತಮ್ಮ ನಡಿಗೆಯನ್ನು ಮುಂದುವರಿಸುವುದನ್ನು ಕಾಣಬಹುದು. ‘ಚಾಯ್‌ವಾಲಾ’ ಎಂದು ಕರೆದು ಅಮೆರಿಕ ವೀಸಾ ನಿಷೇಧಕ್ಕಾಗಿ ಲೇವಡಿ ಮಾಡಲಾಗುತ್ತಿದೆ. 2014 ರಲ್ಲಿ ಪ್ರಧಾನಿಯಾದ ನಂತರ, ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಮೋದಿಗೆ ‘ಯುಎಸ್‌ಗೆ ಆಹ್ವಾನ’ ನೀಡುವುದನ್ನು ಇದರಲ್ಲಿ ಚಿತ್ರಿಸಲಾಗಿದೆ.

ಸ್ವಚ್ಛ ಭಾರತ್ ಮಿಷನ್’, ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’, ‘ಉಜ್ವಲ ಯೋಜನೆ’, ‘ಜನ್ ಧನ್ ಯೋಜನೆ’, ‘ಜೀವನ ಜ್ಯೋತಿ ಬಿಮಾ ಯೋಜನೆ’, ‘ಪಿಎಂ ಆವಾಸ್ ಯೋಜನೆ’ ಮತ್ತು ‘ಫಸಲ್ ಬಿಮಾ ಯೋಜನಾ’ ವನ್ನು ಇಲ್ಲಿ ಹೈಲೈಟ್ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT