24 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಬಳಿಕ ಬಾಲಕನನ್ನು ಮೇಲೆತ್ತಿದ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ 
ದೇಶ

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪರೀಕ್ಷೆಯ ನಂತರ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು ಎಂದು ವಿದಿಶಾ ಜಿಲ್ಲಾಧಿಕಾರಿ ಉಮಾ ಶಂಕರ್ ಭಾರ್ಗವ ಸುದ್ದಿಗಾರರಿಗೆ ತಿಳಿಸಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಾಲಕನ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬೋರ್‌ವೆಲ್‌ಗೆ ಬಿದ್ದ ಸುಮಾರು 24 ಗಂಟೆಗಳ ನಂತರ ಮಗುವನ್ನು ಮೇಲೆತ್ತಲಾಗಿದೆ. ನಂತರ ಜಿಲ್ಲಾ ಕೇಂದ್ರದಿಂದ ಸುಮಾರು 14 ಕಿಮೀ ದೂರದಲ್ಲಿರುವ ಲ್ಯಾಟೇರಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಸಾಗಿಸಲಾಯಿತು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಹರ್ಷಲ್ ಚೌಧರಿ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಲಕ 60 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದು, 43 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಮಗುವನ್ನು ಹೊರತೆಗೆಯಲು ಜೆಸಿಬಿ ಯಂತ್ರಗಳ (ಅರ್ತ್‌ಮೂವರ್) ಸಹಾಯದಿಂದ ಸಮಾನಾಂತರ ಹೊಂಡವನ್ನು ಅಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋಕೇಶ್ ಅಹಿರ್ವಾರ್ ಎಂಬ ಬಾಲಕ ಆಟವಾಡುತ್ತಿದ್ದಾಗ ಜಿಲ್ಲೆಯ ಲಟೇರಿ ತಹಸಿಲ್ ವ್ಯಾಪ್ತಿಯ ಖೇರ್ಖೇಡಿ ಪಥರ್ ಗ್ರಾಮದಲ್ಲಿ ಕಿರಿದಾದ ರಂಧ್ರಕ್ಕೆ ಜಾರಿ ಬಿದ್ದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗ್ರಾಮಸ್ಥರು ಮಾಹಿತಿ ನೀಡಿದ ನಂತರ, ರಕ್ಷಣಾ ತಂಡವು ಸ್ಥಳಕ್ಕೆ ಧಾವಿಸಿ ಮಗುವನ್ನು ಹೊರತೆಗೆಯಲು ಕಾರ್ಯಾಚರಣೆ ಪ್ರಾರಂಭಿಸಿತು ಎಂದು ಚೌಧರಿ ಹೇಳಿದರು.

ಆಕ್ಸಿಜನ್ ಪೈಪ್ ಅನ್ನು ಬೋರ್‌ವೆಲ್‌ಗೆ ಇಳಿಸಲಾಯಿತು ಮತ್ತು ರಕ್ಷಣಾ ತಂಡ ರಾತ್ರಿಯ ದೃಷ್ಟಿ ಸಾಧನದ (night-vision device) ಮೂಲಕ ಬಾಲಕನ ಮೇಲೆ ಕಣ್ಣಿಟ್ಟಿದ್ದರು ಎಂದು ವಿದಿಶಾ ಜಿಲ್ಲಾಧಿಕಾರಿ ಈ ಹಿಂದೆ ತಿಳಿಸಿದ್ದರು.

ಬಾಲಕನನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಂಗಳವಾರ, ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ 9 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ 5 ವರ್ಷದ ಬಾಲಕನನ್ನು ಬೋರ್‌ವೆಲ್‌ನಿಂದ ಹೊರತೆಗೆದರೂ, ಆತ ಬದುಕಿ ಬಂದಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಚಾರ್ ಸಾಥಿಯಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ

ದರ್ಶನ್ ಪ್ರಕರಣ: ಡಿ. 17ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ; ರೇಣುಕಾಸ್ವಾಮಿ ತಂದೆ, ತಾಯಿಗೂ ಸಮಸ್ಸ್

Anantapur: ಶಾಸಕನ ರಾಸಲೀಲೆ Video ವೈರಲ್, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌ಗೆ ಐವರು ನಕ್ಸಲರು ಬಲಿ; ಒಬ್ಬ ಪೊಲೀಸ್ ಹುತಾತ್ಮ

2ನೇ ಏಕದಿನ: ಕೊಹ್ಲಿ, ಗಾಯಕ್ವಾಡ್ ಸ್ಫೋಟಕ ಶತಕ; ಆಫ್ರಿಕಾ ವಿರುದ್ಧ 358 ರನ್ ಬೃಹತ್ ಮೊತ್ತ ಪೇರಿಸಿದ ಭಾರತ

SCROLL FOR NEXT