ಪ್ರಾತಿನಿಧಿಕ ಚಿತ್ರ 
ದೇಶ

ಎಚ್‌3ಎನ್‌2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್‌3ಎನ್‌2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

ಪುದುಚೇರಿ: ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್‌3ಎನ್‌2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

ಕೇಂದ್ರಾಡಳಿತ ಪ್ರದೇಶದ ಪುದುಚೇರಿ, ಕಾರೈಕಲ್, ಮಾಹೆ ಮತ್ತು ಯಾನಂನ ಎಲ್ಲಾ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ವಿಶೇಷವಾಗಿ ಮಕ್ಕಳಲ್ಲಿ ವೈರಸ್ ಹರಡುವಿಕೆಯ ದೃಷ್ಟಿಯಿಂದ ಈ ಆದೇಶವು ಜಾರಿಯಲ್ಲಿರುತ್ತದೆ.

ಶೂನ್ಯವೇಳೆಯಲ್ಲಿ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಮತ್ತು ಶಿಕ್ಷಣ ಸಚಿವ ಎ. ನಮ್ಮಶಿವಾಯಂ, 'ವಿಶೇಷವಾಗಿ ಮಕ್ಕಳಲ್ಲಿ ಜ್ವರ ಹರಡುವ ಹಿನ್ನೆಲೆಯಲ್ಲಿ, ಖಾಸಗಿ-ನಿರ್ವಹಣೆಯ ಸಂಸ್ಥೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳು ಸೇರಿದಂತೆ ಪ್ರಾಥಮಿಕ ತರಗತಿಯಿಂದ 8ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲು ಸರ್ಕಾರ ನಿರ್ಧರಿಸಿದೆ' ಎಂದರು. 

ಮಾರ್ಚ್ 11 ರಂದು ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಪುದುಚೇರಿಯಲ್ಲಿ ಮಾರ್ಚ್ 4 ರವರೆಗೆ ವೈರಲ್ ಎಚ್‌3ಎನ್2 ಉಪ ಪ್ರಕಾರಕ್ಕೆ ಸೇರಿದ 79 ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿಕೆ ನೀಡಿತ್ತು.

ಅಮೆರಿಕ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ ಸಂಸ್ಥೆ (ಸಿಡಿಸಿ) ಪ್ರಕಾರ,  ಎಚ್ 3 ಎನ್ 2  ಸಾಮಾನ್ಯವಾಗಿ ಹಂದಿಗಳಲ್ಲಿ ಹರಡುತ್ತದೆ ಮತ್ತು ಮನುಷ್ಯರಿಗೆ ಸೋಂಕು ತಗುಲುತ್ತದೆ. ಕೆಮ್ಮು, ಜ್ವರ, ನೋವು, ವಾಕರಿಕೆ, ವಾಂತಿ ಅಥವಾ ಅತಿಸಾರ ರೋಗಲಕ್ಷಣಗಳಿವೆ. ಇದು ಋತುಮಾನಕ್ಕೆ ಅನುಗುಣವಾಗಿ ಕಾಣಿಸಿಕೊಳ್ಳುವ ಇನ್‌ಫ್ಲುಯೆಂಜಾ ಸೋಂಕು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT