ಬೊಮ್ಮನ್-ಬೆಳ್ಳಿ ದಂಪತಿಗೆ ಸನ್ಮಾನ ಮಾಡುತ್ತಿರುವ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ 
ದೇಶ

ಆಸ್ಕರ್ ಪ್ರಶಸ್ತಿ: ಬೊಮ್ಮನ್-ಬೆಳ್ಳಿ ದಂಪತಿಗೆ ಸ್ಟ್ಯಾಲಿನ್ ಸನ್ಮಾನ; 91 ಆನೆ ಮಾವುತರಿಗೆ ತಲಾ 1 ಲಕ್ಷ ರೂಪಾಯಿ ನೆರವು ಘೋಷಣೆ

ಆಸ್ಕರ್ ಪ್ರಶಸ್ತಿ ಗೆದ್ದ ಡಾಕ್ಯುಮೆಂಟರಿ ಸಿನಿಮಾ ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ  ರಘು ಎಂಬ ಆನೆಮರಿಯ ಪಾಲಕರಾಗಿದ್ದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಗೆ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಸನ್ಮಾನ ಮಾಡಿ ಗೌರವ ಸಲ್ಲಿಸಿದ್ದಾರೆ. 

ಚೆನ್ನೈ: ಆಸ್ಕರ್ ಪ್ರಶಸ್ತಿ ಗೆದ್ದ ಡಾಕ್ಯುಮೆಂಟರಿ ಸಿನಿಮಾ ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ  ರಘು ಎಂಬ ಆನೆಮರಿಯ ಪಾಲಕರಾಗಿದ್ದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಗೆ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಸನ್ಮಾನ ಮಾಡಿ ಗೌರವ ಸಲ್ಲಿಸಿದ್ದಾರೆ. 

ಆನೆ ಆರೈಕೆ ನಿರ್ವಹಣೆಯಲ್ಲಿ ತಮಿಳುನಾಡಿನ ಅರಣ್ಯ ಇಲಾಖೆಯ ಚಟುವಟಿಕೆಗಳು ಈ ಡಾಕ್ಯುಮೆಂಟರಿಯಿಂದ ಜಾಗತಿಕ ಸಮುದಾಯದ ಗಮನ ಸೆಳೆದಿತ್ತು.

ಮುದುಮಲೈ ರಾಷ್ಟ್ರೀಯ ಉದ್ಯಾನವನದ ತೆಪ್ಪಕ್ಕಾಡ್ ಮತ್ತು ಅಣ್ಣಾಮಲೈನ ಕೊಝಿಕಮುತಿಯಲ್ಲಿನ ಎರಡು ಆನೆ ಶಿಬಿರಗಳಲ್ಲಿ 91 ಆನೆ ಪಾಲಕರಿದ್ದಾರೆ. ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಗೆ ಆಸ್ಕರ್ ಬಂದಿರುವ ಸಂದರ್ಭದಲ್ಲಿ, ಸ್ಟ್ಯಾಲಿನ್ 91 ಮಾವುತರು ಹಾಗೂ ಕಾವಾಡಿಗರಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ತಲಾ 1 ಲಕ್ಷ ರೂಪಾಯಿ ನೆರವನ್ನು ಘೋಷಿಸಿದ್ದಾರೆ. 

ಇದೇ ವೇಳೆ ಸಿಎಂ ಸ್ಟ್ಯಾಲಿನ್ 91 ಮಾವುತರಿಗೆ ಪರಿಸರ ಸ್ನೇಹಿ ಮತ್ತು ಸಾಂಸ್ಕೃತಿಕವಾಗಿ ಹೊಂದಿಕೊಳ್ಳುವ ಮನೆಗಳ ನಿರ್ಮಾಣಕ್ಕಾಗಿ 9.10 ಕೋಟಿ ರೂಪಾಯಿ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ಇದಷ್ಟೇ ಅಲ್ಲದೇ ಅಣ್ಣಾಮಲೈ ಹುಲಿ ಸಂರಕ್ಷಿತ ಪ್ರದೇಶದ ಕೊಝಿಕಮುತಿ ಆನೆ ಶಿಬಿರದ ಸುಧಾರಣೆಗೆ ಸರ್ಕಾರವು 5 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT