ಬಿಆರ್‌ಎಸ್ ನಾಯಕಿ ಕೆ ಕವಿತಾ 
ದೇಶ

ವಿಚಾರಣೆಗೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಗೈರು; ಹೊಸ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಗುರುವಾರ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಾರ್ಚ್ 20ಕ್ಕೆ ಹೊಸ ಸಮನ್ಸ್ ಜಾರಿ ಮಾಡಿದೆ. 

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಗುರುವಾರ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಾರ್ಚ್ 20ಕ್ಕೆ ಹೊಸ ಸಮನ್ಸ್ ಜಾರಿ ಮಾಡಿದೆ. 

ಜಾರಿ ನಿರ್ದೇಶನಾಲಯದ ಸಮನ್ಸ್ ಮತ್ತು ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಕವಿತಾ, ತನ್ನ ಸಮಸ್ಯೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ಈ ಸಂಬಂಧ ಸಮಯಾವಕಾಶ ಬೇಕು ಎಂದು ಬುಧವಾರ ಇ.ಡಿಗೆ ಪತ್ರ ಬರೆದಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಹಂತದಲ್ಲಿ ನಡೆಯುತ್ತಿರುವ ತನಿಖೆಯ ದೃಷ್ಟಿಯಿಂದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ, ಬಿಆರ್‌ಎಸ್‌ ಪಕ್ಷದ ಎಂಎಲ್‌ಸಿಯ ಆರು ಪುಟಗಳ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಆಕೆಯನ್ನು ಮಾರ್ಚ್ 20 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕವಿತಾ ಅವರು ಗುರುವಾರ ತಮ್ಮ ಅಧಿಕೃತ ಪ್ರತಿನಿಧಿಯನ್ನು (ಬಿಆರ್‌ಎಸ್ ಪಕ್ಷದ ಪದಾಧಿಕಾರಿ) ಕಳುಹಿಸಿದ್ದರು. ಅವರು ಕವಿತಾ ಅವರ ಬ್ಯಾಂಕ್ ಸ್ಟೇಟ್‌ಮೆಂಟ್, ವೈಯಕ್ತಿಕ ಮತ್ತು ವ್ಯವಹಾರದ ವಿವರಗಳನ್ನು ಪ್ರಕರಣದ ತನಿಖಾಧಿಕಾರಿಗೆ ಹಸ್ತಾಂತರಿಸಿದರು.

ಈ ಪ್ರಕರಣದಲ್ಲಿ ಇ.ಡಿ ಸಮನ್ಸ್‌ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಕವಿತಾ ಸಲ್ಲಿಸಿರುವ ಮನವಿಯನ್ನು ಮಾರ್ಚ್‌ 24ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಬುಧವಾರ ಒಪ್ಪಿಕೊಂಡಿದೆ.

44 ವರ್ಷದ ರಾಜಕಾರಣಿಯನ್ನು ಮಾರ್ಚ್ 11 ರಂದು ಈ ಪ್ರಕರಣದಲ್ಲಿ ಮೊದಲು ವಿಚಾರಣೆ ನಡೆಸಲಾಯಿತು. ನಂತರ ಮಾರ್ಚ್ 16ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ಇ.ಡಿಗೆ ಕಳುಹಿಸಿದ ಪತ್ರದಲ್ಲಿ ಕವಿತಾ ಅವರು, ಸಮನ್ಸ್‌ಗೆ ಖುದ್ಧಾಗಿ ಹಾಜರಾಗುವ ಅಗತ್ಯವಿಲ್ಲದ ಕಾರಣ ತಾವು ತಮ್ಮ 'ಅಧಿಕೃತ ಪ್ರತಿನಿಧಿ'ಯನ್ನು ಕಳುಹಿಸುತ್ತಿರುವುದಾಗಿತಿಳಿಸಿದ್ದಾರೆ.

'ಸುಪ್ರೀಂಕೋರ್ಟ್‌ನಲ್ಲಿ ನಡೆಯುವ ಪ್ರಕ್ರಿಯೆಗಳು ಪವಿತ್ರ ಮತ್ತು ಶ್ರೇಷ್ಠವಾಗಿದ್ದು, ಈ ವಿಷಯದ ಸಮನ್ಸ್‌ಗೆ ಸಂಬಂಧಿಸಿದಂತೆ ಯಾವುದೇ ಮುಂದಿನ ಪ್ರಕ್ರಿಯೆಗಳು ನಡೆಯುವ ಮೊದಲು ನ್ಯಾಯಾಲಯದ ಫಲಿತಾಂಶವನ್ನು ನಿರೀಕ್ಷಿಸಬೇಕು ಎಂದು ನಾನು ನಿಮ್ಮನ್ನು ವಿನಮ್ರವಾಗಿ ಬೇಡಿಕೊಳ್ಳುತ್ತೇನೆ' ಎಂದು ಅವರು ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT