ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಸರ್ಕಾರದ ಸ್ನೂಪಿಂಗ್ ಪ್ರಕರಣ: ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ಎಫ್ ಐಆರ್ ದಾಖಲು

ದೆಹಲಿ ಸರ್ಕಾರದ ಫೀಡ್ ಬ್ಯಾಕ್ ಯೂನಿಟ್ ನ್ನು ಗೂಢಚಾರಿಕೆ ಮತ್ತು ರಾಜಕೀಯ ಗುಪ್ತಚರ ಮಾಹಿತಿ ಸಂಗ್ರಹಕ್ಕೆ ಬಳಸಿದ್ದಕ್ಕಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಯಡಿಯಾ ಮತ್ತಿತರ ಏಳು ಮಂದಿ ವಿರುದ್ಧ ಸಿಬಿಐ ಮತ್ತೊಂದು ಕೇಸ್ ದಾಖಲಿಸಿದೆ. 

ನವದೆಹಲಿ: ದೆಹಲಿ ಸರ್ಕಾರದ ಫೀಡ್ ಬ್ಯಾಕ್ ಯೂನಿಟ್ ನ್ನು ಗೂಢಚಾರಿಕೆ ಮತ್ತು ರಾಜಕೀಯ ಗುಪ್ತಚರ ಮಾಹಿತಿ ಸಂಗ್ರಹಕ್ಕೆ ಬಳಸಿದ್ದಕ್ಕಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಯಡಿಯಾ ಮತ್ತಿತರ ಏಳು ಮಂದಿ ವಿರುದ್ಧ ಸಿಬಿಐ ಮತ್ತೊಂದು ಕೇಸ್ ದಾಖಲಿಸಿದೆ.

ಸಿಸೋಡಿಯಾ ಮತ್ತು ದೆಹಲಿ ಸರ್ಕಾರದ ಜಾಗೃತ ವಿಭಾಗದ ಮಾಜಿ ಕಾರ್ಯದರ್ಶಿ ಸುಕೇಶ್ ಕುಮಾರ್ ಜೈನ್ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿಶೇಷ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದ ನಿವೃತ್ತ ಸಿಐಎಸ್ ಎಫ್ ಡಿಐಜಿ ರಾಕೇಶ್ ಕುಮಾರ್ ಸಿನ್ಹಾ  ವಿರುದ್ಧ ಮಾರ್ಚ್ 14 ರಂದು ಸಿಬಿಐ ಎಫ್ ಐಆರ್ ದಾಖಲಿಸಿದೆ.

ಇವರಲ್ಲದೆ, ಗುಪ್ತಚರ ವಿಭಾಗದ ಮಾಜಿ ಜಂಟಿ ನಿರ್ದೇಶಕ ಪ್ರದೀಪ್ ಕುಮಾರ್ ಪುಂಜ್, ಸಿಐಎಸ್ ಎಫ್ ನಿವೃತ್ತ ಸಹಾಯಕ ಕಮಾಂಡೆಂಟ್ ಸತೀಶ್ ಖೇತ್ರಾಪಾಲ್ ಮತ್ತು ಕೇಜ್ರಿವಾಲ್ ಅವರ ಸಲಹೆಗಾರರಾಗಿದ್ದ ಗೋಪಾಲ್ ಮೋಹನ್ ವಿರುದ್ದವೂ ಕೇಸ್ ದಾಖಲಾಗಿದೆ. 

ಕ್ರಿಮಿನಲ್ ಪಿತೂರಿ, ವಂಚನೆಯ ಉದ್ದೇಶಕ್ಕಾಗಿ ಫೋರ್ಜರಿ, ನಕಲಿ, ಸುಳ್ಳು ಖಾತೆಗಳ ಸೃಷ್ಟಿ, ಸಾರ್ವಜನಿಕ ಸೇವಕರಿಂದ ಕ್ರಿಮಿನಲ್ ದುರ್ನಡತೆ ಮತ್ತಿತರ ಆರೋಪಗಳ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. 2015 ರಲ್ಲಿ ಎಎಪಿ ಸರ್ಕಾರ ಸ್ಥಾಪಿಸಿದ ಫೀಡ್ ಬ್ಯಾಕ್ ಯೂನಿಟ್ ರಚನೆ ಮತ್ತು ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕೇಸ್ ದಾಖಲಿಸಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 

ದೆಹಲಿ ಸರ್ಕಾರದ ವ್ಯಾಪ್ತಿಯಲ್ಲಿರುವ ವಿವಿಧ ಸಂಸ್ಥೆಗಳ ಕಾರ್ಯನಿರ್ವಹಣೆಯ ಬಗ್ಗೆ ಸೂಕ್ತ ಮಾಹಿತಿ ಮತ್ತು ಕ್ರಮಬದ್ಧ ಪ್ರತಿಕ್ರಿಯೆಯನ್ನು ಸಂಗ್ರಹಿಸಲು ಮತ್ತು ಭ್ರಷ್ಟಾಚಾರವನ್ನು ಪರಿಶೀಲಿಸಲು ಟ್ರ್ಯಾಪ್ ಮಾಡಲು ಎಎಪಿ ಫೀಡ್ ಬ್ಯಾಕ್ ಯೂನಿಟ್ ರಚಿಸಿದೆ ಎಂದು ಎಫ್ ಐಆರ್ ನಲ್ಲಿ ಆರೋಪಿಸಲಾಗಿದೆ.

ರಹಸ್ಯ ಸೇವಾ ವೆಚ್ಚಕ್ಕಾಗಿ 1 ಕೋಟಿ ರೂಪಾಯಿ ನಿಬಂಧನೆಯೊಂದಿಗೆ 2016ರಲ್ಲಿ ಈ ಘಟಕ ಪ್ರಾರಂಭವಾಯಿತು ಎಂದು ಸಿಬಿಐ ಗುರುವಾರು ದಾಖಲಿಸಿರುವ ಎಫ್ ಐಆರ್ ನಲ್ಲಿ ಹೇಳಿದೆ. ಈ ಯೋಜನೆಗೆ ಮಂಜೂರು ಮಾಡಿದ ಹಣವನ್ನು ದೆಹಲಿ ಸರ್ಕಾರ  ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT