ಕಿರಣ್ ರಿಜಿಜು 
ದೇಶ

ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು: ರಾಹುಲ್ ಗಾಂಧಿ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿ

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲಂಡನ್ ಭಾಷಣಕ್ಕಾಗಿ ವಾಗ್ದಾಳಿ ನಡೆಸಿದ್ದು, ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

ನವದೆಹಲಿ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲಂಡನ್ ಭಾಷಣಕ್ಕಾಗಿ ವಾಗ್ದಾಳಿ ನಡೆಸಿದ್ದು, ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರಿಜಿಜು, 'ರಾಹುಲ್ ಗಾಂಧಿ ಅವರು ತಮ್ಮ ಲಂಡನ್ ಸೆಮಿನಾರ್‌ನಲ್ಲಿ ಹೇಳಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ಅವರು ನಮ್ಮ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ರಾಷ್ಟ್ರವನ್ನು ಅವಮಾನಿಸಿದ್ದಾರೆ. ನಮ್ಮ ರಾಷ್ಟ್ರದ ವಿರುದ್ಧ ಮಾತನಾಡುವವರ ವಿರುದ್ಧ ನಾವು ಧ್ವನಿ ಎತ್ತಬೇಕು' ಎಂದು ಹೇಳಿದರು.

'ರಾಹುಲ್ ಗಾಂಧಿ ಏನಾದರೂ ಹೇಳಿದರೆ, ಅದರಿಂದ ಕಾಂಗ್ರೆಸ್ ಸಮಸ್ಯೆಗೆ ಸಿಲುಕಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ, ಅವರು ನಮ್ಮ ದೇಶವನ್ನು ದೂಷಿಸಿದರೆ, ಈ ದೇಶದ ಪ್ರಜೆಗಳಾದ ನಾವು ಸುಮ್ಮನಿರಲು ಸಾಧ್ಯವಿಲ್ಲ' ಎಂದಿದ್ದಾರೆ.

ಇತ್ತೀಚೆಗೆ ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ದಾಳಿಗೆ ಒಳಗಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಸುದ್ದಿಯಾಗಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ (ವಿರೋಧ) ಜಾಗವನ್ನು ನ್ಯಾವಿಗೇಟ್ ಮಾಡುತ್ತಿದ್ದೇವೆ. ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ಕ್ರೂರ ದಾಳಿಗೆ ಒಳಗಾಗಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆದಿದೆ. ಅಮೆರಿಕ ಮತ್ತು ಯುರೋಪ್‌ನಂತಹ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಇದನ್ನು ಗಮನಿಸುವಲ್ಲಿ ವಿಫಲವಾಗಿವೆ' ಎಂದು ಆರೋಪಿಸಿದ್ದರು.

ಈ ಹೇಳಿಕೆಗಳು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಅವರು ವಿದೇಶಿ ನೆಲದಲ್ಲಿ ಭಾರತವನ್ನು ದೂಷಿಸಿದ್ದಾರೆ ಮತ್ತು ವಿದೇಶಿ ಹಸ್ತಕ್ಷೇಪಗಳನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಆಂತರಿಕ ರಾಜಕೀಯವನ್ನು ಎತ್ತುವ ಉದಾಹರಣೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದೆ.

ವಿವಾದದ ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸಂಸತ್ತಿಗೆ ಹಾಜರಾಗಲಿದ್ದು, ಲಂಡನ್‌ನಲ್ಲಿ ಅವರ ಹೇಳಿಕೆಗಳ ವಿವಾದವನ್ನು ಪರಿಹರಿಸುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂಬ ಆಡಳಿತಾರೂಢ ಬಿಜೆಪಿಯ ಕರೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT