ಅರವಿಂದ ಕೇಜ್ರಿವಾಲ್ 
ದೇಶ

ದೀರ್ಘಕಾಲ ಜೈಲಿನಲ್ಲಿಡಲು ಸಿಸೋಡಿಯಾ ವಿರುದ್ಧ ಹಲವಾರು ಸುಳ್ಳು ಪ್ರಕರಣ ದಾಖಲಿಸಲು ಪ್ರಧಾನಿ ಯೋಜನೆ: ಅರವಿಂದ್ ಕೇಜ್ರಿವಾಲ್

ಸುದೀರ್ಘ ಕಾಲ ಜೈಲಿನಲ್ಲಿಡಲು ಎಎಪಿ ನಾಯಕ ಮನೀಶ್ ಸಿಸೋಡಿಯಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಸುಳ್ಳು ಪ್ರಕರಣಗಳನ್ನು ದಾಖಲಿಸಲು ಯೋಜಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಆರೋಪಿಸಿದ್ದಾರೆ.

ನವದೆಹಲಿ: ಸುದೀರ್ಘ ಕಾಲ ಜೈಲಿನಲ್ಲಿಡಲು ಎಎಪಿ ನಾಯಕ ಮನೀಶ್ ಸಿಸೋಡಿಯಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಸುಳ್ಳು ಪ್ರಕರಣಗಳನ್ನು ದಾಖಲಿಸಲು ಯೋಜಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಆರೋಪಿಸಿದ್ದಾರೆ.

ದೆಹಲಿ ಸರ್ಕಾರದ ಫೀಡ್‌ಬ್ಯಾಕ್‌ ಘಟಕಕ್ಕೆ (ಎಫ್‌ಬಿಯು) ಸಂಬಂಧಿಸಿದಂತೆ ರಾಜಕೀಯ ಗೂಢಾಚಾರದ ಆರೋಪದ ಮೇಲೆ ಸಿಸೋಡಿಯಾ ಮತ್ತು ಇತರರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ನಂತರ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.

'ಮನೀಶ್ ಸಿಸೋಡಿಯಾ ವಿರುದ್ಧ ಹಲವಾರು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಸುದೀರ್ಘ ಅವಧಿಗೆ ಕಸ್ಟಡಿಯಲ್ಲಿ ಇಡುವುದು ಪ್ರಧಾನಿಯವರ ಯೋಜನೆಯಾಗಿದೆ. ಇದೊಂದು ದೇಶಕ್ಕೆ ದುಃಖಕರ ಸಂಗತಿಯಾಗಿದೆ' ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ದೆಹಲಿ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ ಕಾರ್ಯನಿರ್ವಹಣೆಯ ಕುರಿತು ಸಂಬಂಧಿತ ಮಾಹಿತಿ ಮತ್ತು ಪ್ರತಿಕ್ರಿಯೆಯನ್ನು ಸಂಗ್ರಹಿಸಲು 2015ರಲ್ಲಿ ಫೀಡ್‌ಬ್ಯಾಕ್‌ ಘಟಕವನ್ನು ಸ್ಥಾಪಿಸಲು ಎಎಪಿಯು ಪ್ರಸ್ತಾಪಿಸಿತ್ತು ಮತ್ತು ಅಲ್ಲದೆ ಇದು ಬೇಹುಗಾರಿಕೆ ಮಾಡಲು ಬಳಕೆಯಾಗುತ್ತಿತ್ತು ಎಂದು ಸಿಬಿಐ ಹೇಳಿದೆ.

2016ರಲ್ಲಿ ಸ್ಥಾಪನೆಯಾದ ಈ ಘಟಕವು ರಹಸ್ಯ ಸೇವಾ ವೆಚ್ಚಕ್ಕಾಗಿ 1 ಕೋಟಿ ರೂಪಾಯಿಗಳನ್ನು ಒದಗಿಸುವುದರೊಂದಿಗೆ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT