ಸಾಂದರ್ಭಿಕ ಚಿತ್ರ 
ದೇಶ

ಅರುಣಾಚಲ ಹುಲಿ ಸಂರಕ್ಷಿತ ಅರಣ್ಯದೊಳಗೆ ಮರ ಕಳ್ಳಸಾಗಣೆದಾರರಿಂದ ರಸ್ತೆ ನಿರ್ಮಾಣ!

2023ರ ಮೊದಲ ಎರಡು ತಿಂಗಳಲ್ಲಿ 30 ಹುಲಿಗಳು ಸಾವನ್ನಪ್ಪಿದ ನಂತರ ಭಾರತ ಹುಲಿ ಸಂರಕ್ಷಣೆಯತ್ತ ಗಮನಹರಿಸುತ್ತಿರುವಾಗಲೇ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮರ ಕಳ್ಳಸಾಗಣೆದಾರರು ದೊಡ್ಡ ಸವಾಲಾಗಿ ಪರಿಣಮಿಸಿದ್ದಾರೆ.

ಗುವಾಹಟಿ: 2023ರ ಮೊದಲ ಎರಡು ತಿಂಗಳಲ್ಲಿ 30 ಹುಲಿಗಳು ಸಾವನ್ನಪ್ಪಿದ ನಂತರ ಭಾರತ ಹುಲಿ ಸಂರಕ್ಷಣೆಯತ್ತ ಗಮನಹರಿಸುತ್ತಿರುವಾಗಲೇ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮರ ಕಳ್ಳಸಾಗಣೆದಾರರು ದೊಡ್ಡ ಸವಾಲಾಗಿ ಪರಿಣಮಿಸಿದ್ದಾರೆ.

ಅರುಣಾಚಲ ಪ್ರದೇಶದ ಭಾರತದ ಪೂರ್ವದ ಚಾಂಗ್ಲಾಂಗ್ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ನಾಮದಾಫಾ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕೋರ್ ಪ್ರದೇಶದಲ್ಲಿ ಮತ್ತು ಅದರ ಸುತ್ತಲೂ ಕಚ್ಚಾ ರಸ್ತೆ ನಿರ್ಮಿಸುವಲ್ಲಿ ಮರ ಕಳ್ಳಸಾಗಾಣಿಕೆದಾರರು ಯಶಸ್ವಿಯಾಗಿರುವುದನ್ನು ಪತ್ತೆಹಚ್ಚಿದ್ದಾರೆ.

ಇದು ಸರಿಸುಮಾರು 20 ಕಿಮೀ ರಸ್ತೆಯಾಗಿದ್ದು, ಅದರಲ್ಲಿ ಮಿನಿ ಟ್ರಕ್‌ಗಳು ಮಾತ್ರ ಸಂಚರಿಸಬಹುದಾಗಿದೆ. ಈ ರಸ್ತೆ 1-2 ಕಿಮೀ ರಾಷ್ಟ್ರೀಯ ಉದ್ಯಾನವನದೊಳಗೆ ಇದ್ದು, ಉಳಿದ ರಸ್ತೆ ಅದರ ಬಫರ್ ವಲಯದಲ್ಲಿದೆ. ಆಡಳಿತ ಮತ್ತು ಅರಣ್ಯ ಇಲಾಖೆಯ ಜಂಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಇದು ಪತ್ತೆಯಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸನ್ನಿ ಕೆ ಸಿಂಗ್ ನೇತೃತ್ವದ ತಂಡ, ದೊಡ್ಡ ಪ್ರಮಾಣದ ಮರ ಕಳ್ಳಸಾಗಣೆಯನ್ನೂ ಪತ್ತೆ ಮಾಡಿದೆ.

"ಇದು ಕಷ್ಟಕರವಾದ ಕಾರ್ಯಾಚರಣೆಯಾಗಿತ್ತು ಮತ್ತು ಕಳ್ಳಸಾಗಣೆದಾರರು ನಾವು ತೆರಳುವ ದಾರಿಯನ್ನು ದೊಡ್ಡ ಮರದ ದಿಮ್ಮಿಗಳಿಂದ ಬಂದ್ ಮಾಡಿದ್ದರಿಂದ ಅಲ್ಲಿಗೆ ತೆರಳಲು ಇನ್ನಷ್ಟು ಕಷ್ಟಕವಾಯಿತು. ಆದಾಗ್ಯೂ, ತಂಡದ ಸದಸ್ಯರ ಕಠಿಣ ಶ್ರಮದಿಂದ ಹಾದಿಯನ್ನು ತೆರವುಗೊಳಿಸಲಾಗಿದೆ ”ಎಂದು ಸನ್ನಿ ಕೆ ಸಿಂಗ್ ಗುರುವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT