ಅಖಿಲೇಶ್ ಯಾದವ್ 
ದೇಶ

ತೃತೀಯ ರಂಗದತ್ತ ಅಖಿಲೇಶ್ ಯಾದವ್ ಚಿತ್ತ: ಆದರೆ ಕಾಂಗ್ರೆಸ್ ಜೊತೆ ಸಮಾಜವಾದಿ ಪಕ್ಷದ ಮೈತ್ರಿಯಿಲ್ಲ!

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ  ಸೇರುವುದಕ್ಕಿಂತ ಹೆಚ್ಚಾಗಿ ತೃತೀಯ ರಂಗವನ್ನು ಅವಲಂಬಿಸಲು ಸಮಾಜವಾದಿ ಪಕ್ಷವು ಯೋಜಿಸುತ್ತಿದೆ.

ಲಕ್ನೋ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ  ಸೇರುವುದಕ್ಕಿಂತ ಹೆಚ್ಚಾಗಿ ತೃತೀಯ ರಂಗವನ್ನು ಅವಲಂಬಿಸಲು ಸಮಾಜವಾದಿ ಪಕ್ಷವು ಯೋಜಿಸುತ್ತಿದೆ.

ಶನಿವಾರ ಕೋಲ್ಕತ್ತಾದಲ್ಲಿ ಕಾಂಗ್ರೆಸ್ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನೇತೃತ್ವದ ಯಾವುದೇ ಮೈತ್ರಿಕೂಟದ ಭಾಗವಾಗಲು ಸಮಾಜವಾದಿ ಪಕ್ಷ ಹಿಂಜರಿಯುತ್ತಿದೆ.

2024 ರಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಗಳಾದ ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ತಮ್ಮ ಅಭ್ಯರ್ಥಿಗಳ ಬಗ್ಗೆ ತಮ್ಮ ಉದ್ದೇಶ ಸ್ಪಷ್ಟಪಡಿಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಇತ್ತೀಚಿನ ಹೇಳಿಕೆಗಳಿಂದ ಇದನ್ನು ಊಹಿಸಬಹುದು.

ಇತ್ತೀಚಿನವರೆಗೂ, ಎಸ್‌ಪಿ ಮತ್ತು ಕಾಂಗ್ರೆಸ್ ಪರಸ್ಪರ ಅಘೋಷಿತ ಮೈತ್ಕಿ ಹೊಂದಿದ್ದವು. ಎಸ್‌ಪಿ ರಾಯ್‌ಬರೇಲಿ ಮತ್ತು ಅಮೇಥಿಯಲ್ಲಿ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೂ, ಮುಲಾಯಂ ಸಿಂಗ್‌ ಯಾದವ್‌ ಅವರ ಕ್ಷೇತ್ರ ಮೈನ್‌ಪುರಿ ಮತ್ತು ಅಖಿಲೇಶ್‌ ಸ್ಪರ್ಧಿಸುವ ಯಾವುದೇ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ  ಮೂಲಕ ಕಾಂಗ್ರೆಸ್‌ ಉತ್ತರ ನೀಡಿತು.

ಕಳೆದ ವಾರ, ಎಸ್‌ಪಿ ಮುಖ್ಯಸ್ಥರು ಅಮೇಥಿಗೆ ಭೇಟಿ ನೀಡಿದಾಗ, ಕ್ಷೇತ್ರವನ್ನು "ಹಾಳು" ಮಾಡಿದ ವಿಐಪಿಗಳಿಗೆ ಮತ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಇಷ್ಟು ವರ್ಷಗಳ ಕಾಲ ರಾಜಕೀಯ ದೊರೆಗಳನ್ನು ಆಯ್ಕೆ ಮಾಡಿದರೂ ಅಮೇಥಿಗೆ  ಬೇಕಾದ ಅರ್ಹತೆ ಸಿಕ್ಕಿಲ್ಲ. ಈ ಬಾರಿ ಅಮೇಥಿಯ ಜನರು ದೊಡ್ಡ ಹೃದಯದಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ, ನಾವು ಇಲ್ಲಿ ಅಭಿವೃದ್ಧಿ  ಮಾಡುತ್ತೇವೆ ಎಂದು ಅಖಿಲೇಶ್ ಹೇಳಿದ್ದರು.

ಇತ್ತೀಚಿನ ದಿನಗಳಲ್ಲಿ, ಬಿಜೆಪಿಯ ವಿರುದ್ಧ ತೃತೀಯ ರಂಗವನ್ನು ರಚಿಸುವ ಪ್ರಯತ್ನಗಳನ್ನು ಬಲಪಡಿಸಲು ವಿರೋಧ ಪಕ್ಷಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಬಿಜೆಪಿಯೇತರ, ಕಾಂಗ್ರೆಸ್- ಇಲ್ಲದ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ.

ಯುಪಿಯಲ್ಲಿ ಮೈತ್ರಿಕೂಟದ ಭಾಗವಾಗಲು ಅಖಿಲೇಶ್ ಕಾಂಗ್ರೆಸ್‌ಗೆ ಎರಡು ಸ್ಥಾನಗಳನ್ನು ಬಿಟ್ಟುಕೊಡಬಹುದು ಎಂದು ಎಸ್‌ಪಿ ಮೂಲಗಳು ತಿಳಿಸಿವೆ. ಆದಾಗ್ಯೂ, ಹಳೆಯ ರಾಷ್ಟ್ರೀಯ ಪಕ್ಷವಾಗಿರುವುದರಿಂದ, ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಹೊಂದಲು ಬಯಸುತ್ತದೆ, ಅದಕ್ಕಾಗಿಯೇ ಎಸ್‌ಪಿ ಮುಖ್ಯಸ್ಥರು ಕಾಂಗ್ರೆಸ್ ವಿರೋಧಿ ನಿಲುವು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT