ದೇಶ

ತೆಲಂಗಾಣ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ನೈತಿಕ ಬಲ ವೃದ್ಧಿ!

Nagaraja AB

ಮೆಹಬೂಬ್ ನಗರ: ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ  ಎ ವಿ ಎನ್ ರೆಡ್ಡಿ ಚುನಾವಣೆಯಲ್ಲಿ ಜಯ ಗಳಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ  ಘೋಷಿಸಿದ್ದಾರೆ. ಮಾರ್ಚ್ 13 ರಂದು ನಡೆದ ಚುನಾವಣೆಯಲ್ಲಿ 21 ಅಭ್ಯರ್ಥಿಗಳು ಕಣದಲ್ಲಿದ್ದರು.

ರೆಡ್ಡಿ ಗೆಲುವನ್ನು  ಶ್ಲಾಘಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್, ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಆರ್ ಎಸ್ ಸರ್ಕಾರದ ಅಪ್ರಜಾಸತಾತ್ಮಕ ಆಡಳಿತದ ವಿರುದ್ಧ ಅತ್ಯುತ್ತಮ ತೀರ್ಪು ನೀಡಿದ ಎಲ್ಲಾ ಶಿಕ್ಷಕರಿಗೆ ಧನ್ಯವಾದಗಳು ಎಂದು ಸಂಜಯ್ ಕುಮಾರ್ ಹೇಳಿದ್ದಾರೆ. 
 

SCROLL FOR NEXT