ಮನೀಶ್ ಸಿಸೋಡಿಯಾಗೆ ಮತ್ತೆ 5 ದಿನ ED ಕಸ್ಟಡಿ 
ದೇಶ

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾಗೆ ಮತ್ತೆ 5 ದಿನ ED ಕಸ್ಟಡಿ

ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಕೋರ್ಟ್ ಮತ್ತೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಕೋರ್ಟ್ ಮತ್ತೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.

ಎರಡು ದಿನಗಳ ವಿಚಾರಣೆಯ ನಂತರ ದೆಹಲಿಯ ಮದ್ಯ ನೀತಿ ವಿಷಯಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಹಣಕಾಸು ತನಿಖಾ ಸಂಸ್ಥೆ ಬಂಧಿಸಿತ್ತು. ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಮನವಿ ಮಾಡಿತ್ತು. 

ಸಿಸೋಡಿಯಾ ಅವರ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ದೆಹಲಿ ಮದ್ಯ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಮನವಿ ಮಾಡಿತ್ತು. 

ಇಡಿ ಬೇಡಿಕೆಯ ಮೇರೆಗೆ ನ್ಯಾಯಾಲಯ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ 5 ದಿನಗಳವರೆಗೆ ವಿಸ್ತರಿಸಿದೆ. ಅಂತೆಯೇ ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 22 ರಂದು ನಡೆಯಲಿದೆ.  ಅಂತೆಯೇ ಮನೀಶ್ ಸಿಸೋಡಿಯಾ ಅವರ ಕುಟುಂಬದ ವೆಚ್ಚ ಮತ್ತು ಅವರ ಪತ್ನಿಯ ವೈದ್ಯಕೀಯ ವೆಚ್ಚ 40,000 ಮತ್ತು 45,000 ರೂ.ಗಳ ಚೆಕ್‌ಗಳಿಗೆ ಸಹಿ ಹಾಕಲು ನ್ಯಾಯಾಲಯವು ಅನುಮತಿ ನೀಡಿದೆ.

ಎರಡು ದಿನಗಳ ವಿಚಾರಣೆಯ ನಂತರ ದೆಹಲಿಯ ಮದ್ಯ ನೀತಿ ವಿಷಯಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಹಣಕಾಸು ತನಿಖಾ ಸಂಸ್ಥೆ ಬಂಧಿಸಿತ್ತು. ಕಳೆದ ತಿಂಗಳು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ ನಂತರ ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

1.23 ಲಕ್ಷ ಇಮೇಲ್ ಗಳ ಕ್ಲೌಡ್ ಡೇಟಾ ರಿಕವರಿ ಮಾಡಿದ ED
ಇದೇ ವೇಳೆ 1.23 ಲಕ್ಷ ಇಮೇಲ್ ಗಳ ಒಳಗೊಂಡಿರುವ ಸಿಸೋಡಿಯಾ ಅವರ ಕ್ಲೌಡ್ ಡೇಟಾವನ್ನು ಹಿಂಪಡೆದಿದ್ದೇವೆ ಮತ್ತು ಡೇಟಾದ ಫೊರೆನ್ಸಿಕ್ ಪರೀಕ್ಷೆಗೆ ಸಮಯ ಬೇಕಾಗುತ್ತದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ಈಗ ರದ್ದಾದ ದೆಹಲಿ ಮದ್ಯ ನೀತಿ ಪ್ರಕರಣದ ಮಾಹಿತಿಯನ್ನು ಒಳಗೊಂಡಿರುವ ತನ್ನ ಹಳೆಯ ಫೋನ್ ಅನ್ನು ಸಿಸೋಡಿಯಾ ಬಿಟ್ಟು ಹೋಗಿದ್ದಾರೆ ಎಂದು ಇಡಿ ಆರೋಪಿಸಿದೆ. ಸಿಸೋಡಿಯಾ ಅವರ ವಕೀಲರು ಬಂಧನ ಬಂಧನ ಅವಧಿ ವಿಸ್ತರಣೆಗಾಗಿ ಇಡಿ ಮನವಿಯನ್ನು ವಿರೋಧಿಸಿದರು ಮತ್ತು ಅಪರಾಧ ಪ್ರಕ್ರಿಯೆಗಳ ಕುರಿತು ಸಂಸ್ಥೆಯಿಂದ ಯಾವುದೇ ಮಾತು ಬಂದಿಲ್ಲ ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT