ಸಂಗ್ರಹ ಚಿತ್ರ 
ದೇಶ

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದ್ದು, ಹೀಗಾಗಿ ಅದರ ಮೇಲೆ ದಾಳಿ ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂಬ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,  ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದೆ. ಹೀಗಾಗಿಯೇ ಅವರು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂಬ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,  ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದೆ. ಹೀಗಾಗಿಯೇ ಅವರು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೇ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶ ಅತ್ಯಂತ ಆತ್ಮವಿಶ್ವಾಸದಲ್ಲಿ ಇರುವ ಸಂದರ್ಭದಲ್ಲಿ ಇಡೀ ವಿಶ್ವದ ಬೌದ್ಧಿಕ ಸಮುದಾಯ ಭಾರತದ ಬಗ್ಗೆ ಅಶಾಭಾವನೆ ಹೊಂದಿರುವಾಗ ನಿರಾಶವಾದದ ಬಗ್ಗೆ ಮಾತನಾಡುವ, ದೇಶವನ್ನು ಅತ್ಯಂತ ಕೀಳಾಗಿ ಬಿಂಬಿಸುವ ಮತ್ತು ದೇಶದ ಮನೋಬಲನ್ನು ಕುಗ್ಗಿಸುವಂತಹ ಕೆಲಸಗಳು ನಡೆಯುತ್ತಿವೆ ಎಂದು ಹೆಸರು ಹೇಳದೆಯೇ ರಾಹುಲ್ ಗಾಂಧಿ ವಿರುದ್ಧ ಕುಟುಕಿದರು.

ಏನಾದರೂ ಶುಭ ಕಾರ್ಯಗಳು ನಡೆಯುವಾಗ ಹಣಗೆ ಕಪ್ಪು ತಿಲಕ ಇಡುವ ಸಂಪ್ರದಾಯ ಇದೆ. ಹೀಗಾಗಿಯೇ ಇದೀಗ ದೇಶದಲ್ಲಿ ಹಲವು ಶುಭ ಘಟನೆಗಳು ನಡೆಯುತ್ತಿದೆ ಎನ್ನುವ ಕಾರಣಕ್ಕಾಗಿ ಕೆಲವರು ಕಪ್ಪು ತಿಲಕ ಇಡುವ ಹೊಣೆ ಹೊತ್ತುಕೊಂಡಿದ್ದಾರೆಂದು ವ್ಯಂಗ್ಯವಾಡಿದರು.

ಪ್ರಜಾಪ್ರಭುತ್ವದ ಸಾಮರ್ಥ್ಯವನ್ನು ಭಾರತ ಇಡೀ ವಿಶ್ವಕ್ಕೆ ಸಾಧಿಸಿ ತೋರಿಸಿದೆ. ಆದರೆ, ಈ ಯಶಸ್ಸು, ಕೆಲವರಿಗೆ ನೋವು ತಂದಿದೆ. ಹೀಗಾಗಿಯೇ ಅವರು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆ. ಆದರೆ, ಇಂತಹ ದಾಳಿಯ ಹೊರತಾಗಿಯೂ ತನ್ನ ಗುರಿಯನ್ನು ಮುಟ್ಟಲು ದೇಶ ಮುಂದಡಿ ಇಡಲಿದೆ ಎಂದು ಹೇಳಿದರು.

ಇದೇ ವೇಳೆ ಇಡೀವಿಶ್ವ, ಇದು ಭಾರತದ ಯುಗ ಎಂದು ಬಣ್ಣಿಸುತ್ತಿದೆ. ಇದಕ್ಕೆ ಕಾರಣವಾಗಿರುವುದು ಭರವಸೆಯ ಬದಲಾವಣೆ ಮತ್ತು ದೇಶದೊಳಗಿನ ಸಾಧನೆ. ಎಳ್ಲಾ ಸರ್ಕಾರಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿ ತಕ್ಕ ಫಲಿತಾಂಶ ಪಡೆದವು. ಆದರೆ, ನಮ್ಮ ಸರ್ಕಾರ ಹೊಸ ಫಲಿತಾಂಶ ಪಡೆಯಲು ವಿಭಿನ್ನ ವೇಗ ಮತ್ತು ಅಗಾಧತೆಯಲ್ಲಿ ಕೆಲಸ ಮಾಡಿತು ಎಂದು ಸರ್ಕಾರದ ಸಾಧನೆಯನ್ನು ಬಣ್ಣಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT