ರಾಹುಲ್ ಗಾಂಧಿ, ಪೊಲೀಸ್ ಅಧಿಕಾರಿ ಸಾಗರ್ ಪ್ರೀತ್ ಹೂಡಾ 
ದೇಶ

ಲೈಂಗಿಕ ದೌರ್ಜನ್ಯ ಸಂತ್ರಸ್ತರ ವಿವರ ನೀಡಲು ಸಮಯಾವಕಾಶ ಕೇಳಿದ ರಾಹುಲ್- ದೆಹಲಿ ಪೊಲೀಸರು

ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ಭಾನುವಾರ ಮುಂಜಾನೆ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ ಹೂಡಾ ಭಾರತ್ ಜೋಡೋ ಯಾತ್ರೆಯ ವೇಳೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ವಿವರ ಕೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ, ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದ್ದೇವೆ. ಸ್ವಲ್ಪ ಸಮಯ ಬೇಕು ಎಂದಿದ್ದಾರೆ. ನಾವು ನೀಡಲಾದ ನೋಟಿಸ್ ನ್ನು ಅವರ ಕಚೇರಿಯಿಂದ ಇಂದು ಸ್ವೀಕರಿಸಲಾಗಿದೆ. ವಿಚಾರಣೆಯ ಅಗತ್ಯವಾದರೆ ನಂತರ ಮಾಡುತ್ತೇವೆ ಎಂದು ಹೂಡಾ ಹೇಳಿದರು. 

ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆಯಾಗಿತ್ತು.  ಅನೇಕ ಜನರನ್ನು ಭೇಟಿಯಾಗಿದ್ದು, ಅದನ್ನು ಸಂಕಲಿಸಲು ಸಮಯ ಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.  ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಅವರು ನಮಗೆ ಭರವಸೆ ನೀಡಿದ್ದಾರೆ ಮತ್ತು ಮಾಹಿತಿ ಪಡೆದ ತಕ್ಷಣ ಮುಂದಿನ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT