ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ 
ದೇಶ

ಹಿಂದೂ ಹೆಣ್ಣು ಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುತ್ತೇವೆ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ

ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ಪಾಟ್ನಾ: ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

'ಸನಾತನ ಧರ್ಮದ ಹೆಣ್ಣುಮಕ್ಕಳು ನಮ್ಮ ದೇಶದ ಹೆಣ್ಣುಮಕ್ಕಳು. ಯಾರು ಅವರ ಗೌರವ ಮತ್ತು ಘನತೆಯೊಂದಿಗೆ ಆಟವಾಡುತ್ತಾರೋ ಅಂತವರ ಕೈಗಳನ್ನು ಕತ್ತರಿಸುತ್ತೇನೆ. ಒಂದು ವೇಳೆ, ಆರ್‌ಜೆಡಿ ನಾಯಕರು ತಮ್ಮ ಹೆಣ್ಣು ಮಕ್ಕಳನ್ನು (ಮದುವೆಗಾಗಿ) ಇತರ ಸಮುದಾಯದ ಜನರಿಗೆ ನೀಡುವುದಾದರೆ, ಅವರು ಹಾಗೆ ಮಾಡಲು ಸ್ವತಂತ್ರರು. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಅದು ಹಾಗೆಯೇ ಉಳಿಯುತ್ತದೆ' ಎಂದು ಚೌಬೆ ಶನಿವಾರ ಹೇಳಿದರು.

'ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಪುತ್ರಿಯರು ಮುಸ್ಲಿಂ ಪುರುಷರನ್ನು ಮದುವೆಯಾಗಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರಿಯರನ್ನು ಮುಸ್ಲಿಮರಿಂದ ರಕ್ಷಿಸಬೇಕು' ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಶಾಸಕ ಭಾಯಿ ವೀರೇಂದ್ರ ಹೇಳಿಕೆ ನೀಡಿದ ಒಂದು ದಿನದ ನಂತರ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಮತ್ತೊಬ್ಬ ಎಂಎಲ್‌ಸಿ ಸಂತೋಷ್ ಸಿಂಗ್, 'ಆರ್‌ಜೆಡಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ. ಯಾವುದೇ ಮುಸ್ಲಿಂ ಯುವಕರು ಹಿಂದೂ ಸಮುದಾಯದ ಹೆಣ್ಣುಮಕ್ಕಳ ಕಡೆಗೆ ಬೆರಳು ತೋರಿಸಿದರೆ, ನಾನು ಅವರ ಬೆರಳನ್ನು ಕತ್ತರಿಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT