ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ 
ದೇಶ

ಹಿಂದೂ ಹೆಣ್ಣು ಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುತ್ತೇವೆ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ

ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ಪಾಟ್ನಾ: ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

'ಸನಾತನ ಧರ್ಮದ ಹೆಣ್ಣುಮಕ್ಕಳು ನಮ್ಮ ದೇಶದ ಹೆಣ್ಣುಮಕ್ಕಳು. ಯಾರು ಅವರ ಗೌರವ ಮತ್ತು ಘನತೆಯೊಂದಿಗೆ ಆಟವಾಡುತ್ತಾರೋ ಅಂತವರ ಕೈಗಳನ್ನು ಕತ್ತರಿಸುತ್ತೇನೆ. ಒಂದು ವೇಳೆ, ಆರ್‌ಜೆಡಿ ನಾಯಕರು ತಮ್ಮ ಹೆಣ್ಣು ಮಕ್ಕಳನ್ನು (ಮದುವೆಗಾಗಿ) ಇತರ ಸಮುದಾಯದ ಜನರಿಗೆ ನೀಡುವುದಾದರೆ, ಅವರು ಹಾಗೆ ಮಾಡಲು ಸ್ವತಂತ್ರರು. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಅದು ಹಾಗೆಯೇ ಉಳಿಯುತ್ತದೆ' ಎಂದು ಚೌಬೆ ಶನಿವಾರ ಹೇಳಿದರು.

'ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಪುತ್ರಿಯರು ಮುಸ್ಲಿಂ ಪುರುಷರನ್ನು ಮದುವೆಯಾಗಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರಿಯರನ್ನು ಮುಸ್ಲಿಮರಿಂದ ರಕ್ಷಿಸಬೇಕು' ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಶಾಸಕ ಭಾಯಿ ವೀರೇಂದ್ರ ಹೇಳಿಕೆ ನೀಡಿದ ಒಂದು ದಿನದ ನಂತರ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಮತ್ತೊಬ್ಬ ಎಂಎಲ್‌ಸಿ ಸಂತೋಷ್ ಸಿಂಗ್, 'ಆರ್‌ಜೆಡಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ. ಯಾವುದೇ ಮುಸ್ಲಿಂ ಯುವಕರು ಹಿಂದೂ ಸಮುದಾಯದ ಹೆಣ್ಣುಮಕ್ಕಳ ಕಡೆಗೆ ಬೆರಳು ತೋರಿಸಿದರೆ, ನಾನು ಅವರ ಬೆರಳನ್ನು ಕತ್ತರಿಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT