ಹಸುಗಳು (ಸಂಗ್ರಹ ಚಿತ್ರ) 
ದೇಶ

ಗೋ ಸೇವಾ ಆಯೋಗ ರಚನೆಗೆ ಮಹಾ ಸಂಪುಟ ಒಪ್ಪಿಗೆ, ಹರ್ಯಾಣ, ಯುಪಿ ಮಾದರಿಯಲ್ಲಿ ಇರಲಿದ್ದಾರೆ ಗೋ ರಕ್ಷಕರು!

ಬೀಫ್ ನಿಷೇಧ ಹಾಗೂ ಗೋಹತ್ಯೆ ನಿಷೇಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಗೋ ಸೇವಾ ಆಯೋಗ ರಚನೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. 

ನವದೆಹಲಿ: ಬೀಫ್ ನಿಷೇಧ ಹಾಗೂ ಗೋಹತ್ಯೆ ನಿಷೇಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಗೋ ಸೇವಾ ಆಯೋಗ ರಚನೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. 

ಮಾ.17 ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು.  ಮಹಾರಾಷ್ಟ್ರ ಗೋ ಸೇವಾ ಆಯೋಗ ಜಾನುವಾರುಗಳ ಕ್ಷೇಮವನ್ನು ಗಮನಿಸಲಿದೆ ಹಾಗೂ ಯಾವುದು ಉಪಯುಕ್ತವಿಲ್ಲ, ಹಾಲು ನೀಡುತ್ತಿಲ್ಲ, ಕೃಷಿ ಚಟುವಟಿಕೆಗೆ ಉಪಯುಕ್ತವಿಲ್ಲ ಎಂಬುದರ ಮೌಲ್ಯಮಾಪನ ಮಾಡಲಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಆಯೋಗ ಸ್ಥಾಪನೆಗೆ 10 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದ್ದು, ಶಾಸನಬದ್ಧ ಸಂಸ್ಥೆಯಾಗಿ ಸ್ಥಾಪಿಸಲು ಈ ವಾರ ಕರಡು ಮಸೂದೆಯನ್ನು ಸದನದಲ್ಲಿ ಮಂಡಿಸಲಾಗುತ್ತದೆ. 

ಹರ್ಯಾಣ-ಉತ್ತರ ಪ್ರದೇಶದ ಮಾದರಿಯಲ್ಲಿ ಈ ಗೋ ಸೇವಾ ಆಯೋಗವನ್ನು ರಚಿಸಲಾಗಿದ್ದು, ಗೋಹತ್ಯೆಯನ್ನು ತಡೆಯಲು ಈ ಆಯೋಗ ಸರ್ಕಾರದ ವಿವಿಧ ಸಂಸ್ಥೆಗಳೊಂದಿಗೆ ಸಮನ್ವಯ ವಹಿಸಿ ಕಾರ್ಯನಿರ್ವಹಿಸಲಿದೆ. 

ಬಿಡಾಡಿ ದನಗಳು ಹಾಗೂ ಉಪಯುಕ್ತವಿಲ್ಲದ ದನಗಳಿಗೆ ಗೋಶಾಲೆಗಳನ್ನು ನಿರ್ಮಿಸುವ ವಿಷಯದಲ್ಲೂ ಈ ಆಯೋಗ ನಿಗಾ ವಹಿಸಲಿದೆ ಹಾಗೂ ಅದಕ್ಕೆ ಬೇಕಾದ ಆರ್ಥಿಕ ನೆರವನ್ನೂ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆಯೋಗಕ್ಕೆ ಓರ್ವ ಅಧ್ಯಕ್ಷರು ಇರಲಿದ್ದು, ಸರ್ಕಾರವೇ ನೇಮಕ ಮಾಡಲಿದೆ. 14 ಹಿರಿಯ ಅಧಿಕಾರಿಗಳು ಈ ಆಯೋಗದಲ್ಲಿರಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT