ಇಂಡಿಗೋ ವಿಮಾನ 
ದೇಶ

ವೈದ್ಯಕೀಯ ತುರ್ತು: ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮಯನ್ಮಾರ್ ಗೆ ಡೈವರ್ಟ್

ಬ್ಯಾಂಕಾಕ್‌ನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣ ಭಾನುವಾರ ಮಯನ್ಮಾರ್ ನ ರಂಗೂನ್(ಯಾಂಗೋನ್)ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಮುಂಬೈ: ಬ್ಯಾಂಕಾಕ್‌ನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣ ಭಾನುವಾರ ಮಯನ್ಮಾರ್ ನ ರಂಗೂನ್(ಯಾಂಗೋನ್)ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಆದಾಗ್ಯೂ, ವಿಮಾನ ಲ್ಯಾಂಡ್ ಆಗುತ್ತಿದ್ದಂತೆ "ವಿಮಾನ ನಿಲ್ದಾಣದ ವೈದ್ಯಕೀಯ ತಂಡ" ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿರುವುದಾಗಿ ಇಂಡಿಗೋ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

"ಇಂಡಿಗೋ ಫ್ಲೈಟ್ 6E-57, ಬ್ಯಾಂಕಾಕ್‌ನಿಂದ ಮುಂಬೈಗೆ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತುಪರಿಸ್ಥಿತಿಯ ಕಾರಣ ರಂಗೂನ್‌ಗೆ ತಿರುಗಿಸಲಾಗಿದೆ. ದುರದೃಷ್ಟವಶಾತ್, ಆಗಮನದ ನಂತರ, ವಿಮಾನ ನಿಲ್ದಾಣದ ವೈದ್ಯಕೀಯ ತಂಡ ಪ್ರಯಾಣಿಕ ಮೃತಪಟ್ಟಿರುವುದಾಗಿ ಘೋಷಿಸಿದರು" ಎಂದು ಏರ್‌ಲೈನ್ ಸಂಕ್ಷಿಪ್ತ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಡಿಗೋ ಪ್ರಯಾಣಿಕನೊಬ್ಬರು ಮಾರ್ಗ ಮಧ್ಯದಲ್ಲಿ ವಿಮಾನದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಎರಡನೇ ಘಟನೆ ಇದಾಗಿದೆ.

ಈ ಹಿಂದೆ ಮಾರ್ಚ್ 17 ರಂದು ರಾಂಚಿ-ಪುಣೆ ಇಂಡಿಗೋ ವಿಮಾನವನ್ನು ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣ ನಾಗ್ಪುರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು ಮತ್ತು ತಕ್ಷಣ ನಾಗ್ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT