ಸೋಮವಾರ 10 ಗಂಟೆಗೂ ಹೆಚ್ಚು ಕಾಲ ವಿಚಾರಣೆಗೊಳಗಾದ ಬಳಿಕ ಕವಿತಾ ಅವರು ಇಡಿ ಕಚೇರಿಯಿಂದ ನಿರ್ಗಮಿಸುತ್ತಿರುವುದು. 
ದೇಶ

ದೆಹಲಿ ಅಬಕಾರಿ ಹಗರಣ ಪ್ರಕರಣ: 10 ಗಂಟೆಗಳ ಕಾಲ ವಿಚಾರಣೆ ಬಳಿಕ ಕವಿತಾಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ

ದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ನಿನ್ನೆ ಬೆಳಿಗ್ಗೆ 10.30ಕ್ಕೆ ಕವಿತಾ ಅವರು ದೆಹಲಿ ಕಚೇರಿಗೆ ಆಗಮಿಸಿದ್ದು, ಈ ವೇಳೆ ವಿಚಾರಣೆ ಆರಂಭಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾತ್ರಿ 9.15ಕ್ಕೆ ಮುಕ್ತಾಯಗೊಳಿಸಿದರು. ವಿಚಾರಣೆ ಬಳಿಕ ಕಚೇರಿಯಿಂದ ಕವಿತಾ ಅವರು ವಿಜಯ ಚಿಹ್ನೆಯನ್ನು ತೋರಿಸುತ್ತಾ ಹೊರಬಂದು ಇಡಿ ಕಚೇರಿಯಿಂದ ನಿರ್ಗಮಿಸಿದರು.

ಇದೀಗ ಮರಳಿ ವಿಚಾರಣೆಗೆ ಹಾಜರಾಗುವಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು, ಇಂದೂ ಕೂಡ ಕವಿತಾ ಅವರು ವಿಚಾರಣೆಗೆ ಹಾಜರಾಗಬೇಕಿದೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಮಾರು ಒಂಬತ್ತು ಗಂಟೆಗಳ ಕಾಲ ಮೊದಲು ವಿಚಾರಣೆ ನಡೆಸಿದ್ದರು.

ನಂತರ ಮಾರ್ಚ್ 16 ರಂದು ಅವರಿಗೆ ಮತ್ತೆ ಸಮನ್ಸ್ ಮಾಡಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ಉಲ್ಲೇಖಿಸಿ ವಿಚಾರಣೆಯಿಂದ ಹೊರಗುಳಿದಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಇಡಿ ಅಧಿಕಾರಿಗಳು ಮಾರ್ಚ 20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ನಡುವೆ ಕವಿತಾ ಅವರ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮಾರ್ಚ್ 24ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT