ಮಲ್ಲಿಕಾರ್ಜುನ ಖರ್ಗೆ 
ದೇಶ

ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್‌ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್‌ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನವದೆಹಲಿ: ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್‌ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

'ಇ.ಡಿ, ಸಿಬಿಐಗಳು ವಿರೋಧ ಪಕ್ಷದ ನಾಯಕರಿಗೆ ಆದರೆ ಮೋದಿಜಿಯ ಮೆಹುಲ್‌ಬಾಯಿ ಇಂಟರ್‌ಪೋಲ್‌ನಿಂದ ಪರಿಹಾರ ಪಡೆದರು. ಅವರು ತಮ್ಮ ಆತ್ಮೀಯ ಗೆಳೆಯನಿಗಾಗಿ ಸಂಸತ್ತನ್ನು ನಿಷ್ಕ್ರಿಯಗೊಳಿಸಬಹುದಾದರೆ, ಅವರು ಐದು ವರ್ಷಗಳ ಹಿಂದೆ ದೇಶದಿಂದ ಓಡಿಹೋಗಲು ಸಹಾಯ ಮಾಡಿದ ತನ್ನ ಹಳೆಯ ಸ್ನೇಹಿತನಿಗೆ ಈಗ ಸಹಾಯವನ್ನು ಹೇಗೆ ನಿರಾಕರಿಸುತ್ತಾರೆ' ಎಂದು ದೂರಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 11,356.84 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೆಹುಲ್ ಚೋಕ್ಸಿಯನ್ನು ಇಂಟರ್‌ಪೋಲ್ ತನ್ನ 'ರೆಡ್' ನೋಟಿಸ್ ಪಟ್ಟಿಯಿಂದ ಹೊರಗಿಟ್ಟಿದೆ.

2018ರ ಡಿಸೆಂಬರ್‌ನಲ್ಲಿ ಚೋಕ್ಸಿಯನ್ನು ರೆಡ್ ಕಾರ್ನರ್ ನೋಟಿಸ್ ಪಟ್ಟಿಗೆ ಸೇರಿಸಲಾಯಿತು. ಮೂಲಗಳ ಪ್ರಕಾರ, ಭಾರತ ಸರ್ಕಾರದ ಅಧಿಕಾರಿಗಳು ಇಂಟರ್‌ಪೋಲ್‌ನ ಕ್ರಮವನ್ನು ವಿರೋಧಿಸಿದರೂ, ಅದು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿತು ಎನ್ನಲಾಗಿದೆ.

ಇದರಿಂದ ಮೆಹುಲ್ ಚೋಕ್ಸಿ ಅವರ ಗಡಿಪಾರಿಗಾಗಿ ಕಾಯುತ್ತಿದ್ದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ)ಗೆ ತೀವ್ರ ಹಿನ್ನಡೆಯಾಗಿದೆ.

ಆದಾಗ್ಯೂ, ಆಂಟಿಗುವಾದಿಂದ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕ್ರಮದ ಮೇಲೆ ಇದು ಪರಿಣಾಮ ಬೀರುವುದಿಲ್ಲ ಎಂದು ಈ ವಿಷಯದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರದಲ್ಲಿದ್ದಾರೆ ಮತ್ತು ಭಾರತೀಯ ಅಧಿಕಾರಿಗಳು ಅವರನ್ನು ಹಸ್ತಾಂತರಿಸುವಂತೆ ಆಂಟಿಗ್ವಾನ್ ಅಧಿಕಾರಿಗಳನ್ನು ಕೇಳಿದ್ದಾರೆ. ಆದ್ದರಿಂದ ಅವರನ್ನು ವಿಚಾರಣೆಗೆ ಒಳಪಡಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!