ಸಾಂದರ್ಭಿಕ ಚಿತ್ರ 
ದೇಶ

ಮರ್ಯಾದಾ ಹತ್ಯೆ: ಪತ್ನಿಯನ್ನು ತವರು ಮನೆಗೆ ಕಳಿಸಿ, ಡೇಟಾ ಕೇಬಲ್‌ನಿಂದ ಮಗಳ ಕತ್ತು ಹಿಸುಕಿ ಕೊಂದ ತಂದೆ

ಮರ್ಯಾದಾ ಹತ್ಯೆಯ ಪ್ರಕರಣವೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಮಗನ ಸಮ್ಮುಖದಲ್ಲಿಯೇ ಡೇಟಾ ಕೇಬಲ್ ಬಳಸಿ ತನ್ನ ಅಪ್ರಾಪ್ತ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಕಾನ್ಪುರ: ಮರ್ಯಾದಾ ಹತ್ಯೆಯ ಪ್ರಕರಣವೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಮಗನ ಸಮ್ಮುಖದಲ್ಲಿಯೇ ಡೇಟಾ ಕೇಬಲ್ ಬಳಸಿ ತನ್ನ ಅಪ್ರಾಪ್ತ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾನೆ.

ಅಪರಾಧ ಮಾಡುವ ಮೊದಲು ಆತ ತನ್ನ ಪತ್ನಿಯನ್ನು ಆಕೆಯ ತಾಯಿಯ ಮನೆಗೆ ಕಳುಹಿಸಿದ್ದ. ಘಟನೆಯ ಬಗ್ಗೆ ಮಗ ತನ್ನ ತಾಯಿಗೆ ತಿಳಿಸಿದ್ದು, ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಫೋರೆನ್ಸಿಕ್ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದೆ. ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ರಾವತ್‌ಪುರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಓಜಾ ಮಾತನಾಡಿ, ರಾಧಾ ಪುರಂ ನಿವಾಸಿ ಶ್ಯಾಮ್ ಬಹದ್ದೂರ್ ಎಂಬಾತ ತನ್ನ 16 ವರ್ಷದ ಮಗಳು ಅರ್ಚನಾಳ ಅನೈತಿಕ ಸಂಬಂಧದ ಬಗ್ಗೆ ತಿಳಿದುಕೊಂಡು ಆಕೆಗೆ ಛೀಮಾರಿ ಹಾಕಿದ್ದಲ್ಲದೆ, ಥಳಿಸಿದ್ದ. ಈ ವಿಚಾರವಾಗಿ ಪತ್ನಿ ಸಂಗೀತಾ ಅವರೊಂದಿಗೆ ಜಗಳವಾಡುತ್ತಿದ್ದ. ಪದೇ ಪದೆ ಜಗಳವಾಗುತ್ತಿದ್ದರಿಂದ ಶ್ಯಾಮ್ ಬಹದ್ದೂರ್ ಕೆಲ ದಿನಗಳ ಹಿಂದೆ ಸಂಗೀತಾಳನ್ನು ಆಕೆಯ ತವರು ಮನೆಗೆ ಕಳುಹಿಸಿದ್ದ ಎಂದು ತಿಳಿಸಿದ್ದಾರೆ.

ಸೋಮವಾರ ಸಂಜೆ ಮದ್ಯದ ಅಮಲಿನಲ್ಲಿ ಮನೆಗೆ ಬಂದ ಶ್ಯಾಮ್, ಮಗಳು ಯಾರೊಂದಿಗೋ  ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಂಡಿದ್ದಾನೆ. ಈ ವೇಳೆ ಆಕೆಗೆ ತೀವ್ರವಾಗಿ ಥಳಿಸಿದ್ದಾನೆ. ತೀವ್ರವಾಗಿ ಕೋಪಗೊಂಡಿದ್ದ ಆತ, ತನ್ನ ಮಗನ ಮುಂದೆಯೇ ಅವಳ ಮೊಬೈಲ್ ಫೋನ್‌ನ ಡೇಟಾ ಕೇಬಲ್‌ನಿಂದ ಕತ್ತು ಹಿಸುಕಿ ಕೊಂದಿದ್ದಾನೆ' ಎಂದು ಓಜಾ ಹೇಳಿದರು.

ಕೃತ್ಯವನ್ನು ಒಪ್ಪಿಕೊಂಡಿರುವ ಆರೋಪಿಯನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಇದರೊಂದಿಗೆ ಸ್ಥಳದಲ್ಲಿ ತನಿಖೆ ನಡೆಸಿ ಕೊಲೆಯ ಬಗ್ಗೆ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಫೋರೆನ್ಸಿಕ್ ತಂಡವು ಬಾಲಕಿಯ ಕತ್ತು ಹಿಸುಕಲು ಬಳಸಿದ ಡೇಟಾ ಕೇಬಲ್ ಅನ್ನು ಸಹ ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT