ಗೌತಮ್ ಅದಾನಿ 
ದೇಶ

ಹಿಂಡೆನ್ ಬರ್ಗ್ ಎಫೆಕ್ಟ್: ಅದಾನಿ ಸಂಪತ್ತಿನಲ್ಲಿ ಶೇ.60 ರಷ್ಟು ಕುಸಿತ

ಕಾರ್ಪೊರೇಟ್ ಆಡಳಿತ ಮತ್ತು ಲೆಕ್ಕಪತ್ರ ವಂಚನೆ ಆರೋಪದಿಂದಾಗಿ ಗೌತಮ್ ಅದಾನಿ ಅವರ ಭವಿಷ್ಯ ಮೇಲೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಇದರಿಂದಾಗಿ  ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖೇಶ್ ಅಂಬಾನಿ ದೇಶದ ನಂಬರ್ 1 ಶ್ರೀಮಂತ ಸ್ಥಾನ ಅಲಂಕರಿಸಿದ್ದಾರೆ. 

ನವದೆಹಲಿ: ಕಾರ್ಪೊರೇಟ್ ಆಡಳಿತ ಮತ್ತು ಲೆಕ್ಕಪತ್ರ ವಂಚನೆ ಆರೋಪದಿಂದಾಗಿ ಗೌತಮ್ ಅದಾನಿ ಅವರ ಭವಿಷ್ಯ ಮೇಲೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಇದರಿಂದಾಗಿ  ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖೇಶ್ ಅಂಬಾನಿ ದೇಶದ ನಂಬರ್ 1 ಶ್ರೀಮಂತ ಸ್ಥಾನ ಅಲಂಕರಿಸಿದ್ದಾರೆ. 

ಎಂ3ಎಂ ಹುರುನ್ ಗ್ಲೋಬಲ್ ರಿಚ್ ಲಿಸ್ಟ್ ಪ್ರಕಾರ, ಅದಾನಿ ಕಳೆದ ವರ್ಷದಿಂದ ಪ್ರತಿ ವಾರ 3,000 ಕೋಟಿ ಸಂಪತ್ತನ್ನು ಕಳೆದುಕೊಂಡಿದ್ದಾರೆ ಮತ್ತು ಅವರ ಒಟ್ಟಾರೆ ನಿವ್ವಳ ಮೌಲ್ಯವು  ಅವರ ಗರಿಷ್ಠ ಸಂಪತ್ತಿನ ಮಟ್ಟಕ್ಕಿಂತ ಶೇ.60 ರಷ್ಟು ಕಡಿಮೆಯಾಗಿದೆ. ಮಾರ್ಚ್ ಮಧ್ಯದಲ್ಲಿ ಅವರ ಒಟ್ಟಾರೇ ಸಂಪತ್ತು 53 ಬಿಲಿಯನ್ ಡಾಲರ್ ನಷ್ಟಾಗಿದೆ.

ಅಂಬಾನಿ ಅವರ ಸಂಪತ್ತಿನಲ್ಲಿಯೂ ಕುಸಿತವಾಗಿದೆ. ಆದರೆ, ಅವರ ನಿವ್ವಳ ಮೌಲ್ಯವು ಶೇ. 20 ರಷ್ಟು ಕುಸಿತದೊಂದಿಗೆ 82 ಬಿಲಿಯನ್ ಡಾಲರ್ ನಷ್ಟಾಗಿದೆ. ಇದರಿಂದಾಗಿ ಅವರು ಅದಾನಿಯನ್ನು ಹಿಂದಿಕ್ಕಿ ದೇಶದ ಅತ್ಯಂತ ಶ್ರೀಮಂತ ಎನ್ನಿಸಿಕೊಂಡಿದ್ದಾರೆ. 

ಇದಕ್ಕೂ ಮುನ್ನ ಅದಾನಿ ಉದ್ಯಮ ಸಮೂಹ ಸಂಸ್ಥೆಗಳು ದೊಡ್ಡ ಪ್ರಮಾಣದಲ್ಲಿ ಲೆಕ್ಕಪತ್ರ ವಂಚನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಅಂಕಿಅಂಶ ತಿರುಚಲಾಗಿದೆ ಎಂದು ಅಮೆರಿಕದ ಕಿರು-ಮಾರಾಟಗಾರ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿತ್ತು. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಕಂಪನಿಗಳ ಷೇರು ಬೆಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT