ನವಜಾತ ಶಿಶು (ಸಂಗ್ರಹ ಚಿತ್ರ) 
ದೇಶ

ದಾಳಿ ವೇಳೆ ತುಳಿತದಿಂದ 4 ದಿನಗಳ ಶಿಶು ಸಾವು: ಜಾರ್ಖಂಡ್ ನ 6 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ

ಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ಜಾರ್ಖಂಡ್: ಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ಘಟನೆ ಸಂಬಂಧ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, 5 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. 

ಜಾರ್ಖಂಡ್ ನ ಗಿರಿಡಿಹ್ ನಲ್ಲಿ ಈ ಘಟನೆ ನಡೆದಿದೆ.  4 ದಿನಗಳ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಾಗಿದ್ದು, ಪೊಲೀಸ್ ಅಧಿಕಾರಿಗಳ ಬೂಟಿನ ತುಳಿತಕ್ಕೆ ಒಳಗಾದ ಮಗುವಿನ  ಗುಲ್ಮ (ದೇಹದ ಅಂಗ) ಛಿದ್ರಗೊಂಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಬ್ಬರು ವ್ಯಕ್ತಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದಾಗ ಈ ಘಟನೆ ನಡೆದಿದೆ. ಮಗುವಿನ ಅಜ್ಜ ಹಾಗೂ ಇನ್ನೂ ಇತರರ ವಿರುದ್ಧ ಪೊಲೀಸರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಹೋಗಿದ್ದರು. 

ಘಟನೆಯ ಬಗ್ಗೆ ಸಿಎಂ ಹೇಮಂತ್ ಸೊರೇನ್ ತನಿಖೆಗೆ ಆದೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT