ಘಟನೆ ನಡೆದ ಸ್ಥಳ 
ದೇಶ

ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!

ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಕೊಯಂಬತ್ತೂರು: ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಕೊಯಂಬತ್ತೂರಿನ ರಾಮನಾಥಪುರಂನ ಕಾವೇರಿ ನಗರದ 33 ವರ್ಷದ ಕವಿತಾ 2016 ರಲ್ಲಿ ಬಸ್ ಪ್ರಯಾಣಿಕರೊಬ್ಬರ ಚೈನ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದಳು, ಜಾಮೀನಿನ ಮೇಲೆ ಹೊರಗಿದ್ದಳು. ಆಕೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬರುತ್ತಿದ್ದಳು.

ಅವಳು ತನ್ನ ಇಬ್ಬರು ಮಕ್ಕಳು ಮತ್ತು ಅವಳ ಪತಿ ಶಿವನಿಂದ ದೂರವಾಗಿ ವಾಸಿಸುತ್ತಿದ್ದಳು, ಅವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದಳು. ಗುರುವಾರ, ಕವಿತಾ ಪ್ರಕರಣದ ವಿಚಾರಣೆಗಾಗಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್  ಅವರನ್ನು ಭೇಟಿ ಮಾಡಿದ್ದಳು, ಆಕೆಯನ್ನು ಹಿಂಬಾಲಿಸಿದ ಪತಿ ಶಿವ ಕೋರ್ಟ್ ಕಾರಿಡಾರ್‌ನಲ್ಲಿ ಕಾಯುತ್ತಿದ್ದಾಗ  ಇಬ್ಬರು ಜಗಳಕ್ಕಿಳಿದರು.

ಇಬ್ಬರ ನಡುವೆ ಜಗಳ ನಡೆಯುತ್ತಿದ್ದಾಗ ಶಿವ ತಾನು ಬಚ್ಚಿಟ್ಟಿದ್ದ ಪ್ಲಾಸ್ಟಿಕ್ ಬಾಟಲಿಯಿಂದ ಕವಿತಾ ಮೇಲೆ ಆಸಿಡ್ ಸುರಿದಿದ್ದಾನೆ. ಕವಿತಾ ಅವರಿಗೆ ಗಂಭೀರ ಗಾಯಗಳಾಗಿವೆ. ಅಲ್ಲಿದ್ದ ವಕೀಲರು ದಾಳಿಯನ್ನು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಆಸಿಡ್ ಸೋರಿಕೆಯಿಂದಾಗಿ ವಕೀಲರೊಬ್ಬರಿಗೆ ಸಣ್ಣ ಸುಟ್ಟ ಗಾಯಗಳಾಗಿವೆ.

ಶಿವನನ್ನು ಥಳಿಸಿದ ವಕೀಲರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕವಿತಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT