ಪ್ರತಿಪಕ್ಷಗಳ ನಾಯಕರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು. 
ದೇಶ

ಅದಾನಿ ಗ್ರೂಪ್‌ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ರಾಷ್ಟ್ರಪತಿ ಭವನಕ್ಕೆ ಪ್ರತಿಪಕ್ಷಗಳ ಮೆರವಣಿಗೆ, ಹಲವು ನಾಯಕರು ಪೊಲೀಸರ ವಶಕ್ಕೆ

ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪ್ರತಿಪಕ್ಷಗಳ ನಾಯಕರು ತಮ್ಮ ಗಮ್ಯಸ್ಥಾನವನ್ನು ತಲುಪದಂತೆ ತಡೆಯುವ ಪ್ರಯತ್ನವಾಗಿ ಭಾರೀ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಪಕ್ಷಗಳು ಪ್ರತಿಭಟನೆ ಮೆರವಣಿಗೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ನಾಯಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಬಸ್ ನಲ್ಲಿ ಕೂರಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ವರದಿಗಳು ತಿಳಿಸಿವೆ.

ಪ್ರತಿಭಟನಾ ಮೆರವಣಿಗೆ ಅನುಮತಿ ಪಡೆಯಲಾಗಿರಲಿಲ್ಲ. ಅಲ್ಲದೆ, ಭೇಟಿಗೆ ರಾಷ್ಟ್ರಪತಿಗಳೂ ಕೂಡ ಸಮಯ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ನಡುವೆ ಹಲವು ರಾಜ್ಯಗಳಲ್ಲೂ ಕಾಂಗ್ರೆಸ್ ಘಟಗಳು ಏಕಕಾಲದಲ್ಲಿ ಪ್ರತಿಭಟನೆ ನಡೆಸಿವೆ. ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ, ಇತರ ಮುಖಂಡರು ಮತ್ತು ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT