ಪ್ರತಿಪಕ್ಷಗಳ ನಾಯಕರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು. 
ದೇಶ

ಅದಾನಿ ಗ್ರೂಪ್‌ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ರಾಷ್ಟ್ರಪತಿ ಭವನಕ್ಕೆ ಪ್ರತಿಪಕ್ಷಗಳ ಮೆರವಣಿಗೆ, ಹಲವು ನಾಯಕರು ಪೊಲೀಸರ ವಶಕ್ಕೆ

ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪ್ರತಿಪಕ್ಷಗಳ ನಾಯಕರು ತಮ್ಮ ಗಮ್ಯಸ್ಥಾನವನ್ನು ತಲುಪದಂತೆ ತಡೆಯುವ ಪ್ರಯತ್ನವಾಗಿ ಭಾರೀ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಪಕ್ಷಗಳು ಪ್ರತಿಭಟನೆ ಮೆರವಣಿಗೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ನಾಯಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಬಸ್ ನಲ್ಲಿ ಕೂರಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ವರದಿಗಳು ತಿಳಿಸಿವೆ.

ಪ್ರತಿಭಟನಾ ಮೆರವಣಿಗೆ ಅನುಮತಿ ಪಡೆಯಲಾಗಿರಲಿಲ್ಲ. ಅಲ್ಲದೆ, ಭೇಟಿಗೆ ರಾಷ್ಟ್ರಪತಿಗಳೂ ಕೂಡ ಸಮಯ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ನಡುವೆ ಹಲವು ರಾಜ್ಯಗಳಲ್ಲೂ ಕಾಂಗ್ರೆಸ್ ಘಟಗಳು ಏಕಕಾಲದಲ್ಲಿ ಪ್ರತಿಭಟನೆ ನಡೆಸಿವೆ. ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ, ಇತರ ಮುಖಂಡರು ಮತ್ತು ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT