ರಾಹುಲ್ ಗಾಂಧಿ 
ದೇಶ

'ಅಪರಾಧಿ ಎಂದು ಘೋಷಿಸುವ ಮುನ್ನ ಕೋರ್ಟ್ ಗೆ ಕ್ಷಮೆಯಾಚಿಸುವಂತೆ ರಾಹುಲ್‌ಗೆ ಗುಜರಾತ್ ನಾಯಕರ ಸಲಹೆ'

ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸುವ ಮುನ್ನ ತಮ್ಮ ಹೇಳಿಕೆಗಳಿಗೆ ಕೋರ್ಟ್ ಮುಂದೆ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಹಿರಿಯ ನಾಯಕರು...

ಅಹಮದಾಬಾದ್: ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸುವ ಮುನ್ನ ತಮ್ಮ ಹೇಳಿಕೆಗಳಿಗೆ ಕೋರ್ಟ್ ಮುಂದೆ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಹಿರಿಯ ನಾಯಕರು ಸಲಹೆ ನೀಡಿದ್ದರು. ಆದರೆ ರಾಹುಲ್ ಗಾಂಧಿ ತಮ್ಮ ಪಕ್ಷದ ನಾಯಕರ ಮನವಿಯನ್ನು ತಿರಸ್ಕರಿಸಿದ್ದರು.

ನ್ಯಾಯಾಲಯ ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸುವ ಮುನ್ನ ಕೋರ್ಟ್ ಗೆ ಕ್ಷಮೆಯಾಚಿಸುವಂತೆ ಗುಜರಾತ್ ಘಟಕದ ನಾಯಕರು ರಾಹುಲ್ ಅವರ ಮನವೊಲಿಸಲು ಪ್ರಯತ್ನಿಸಿದ್ದರು ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಆದರೆ ರಾಹುಲ್ ಗಾಂಧಿ ಕ್ಷಮೆಯಾಚಿಸಲು ನಿರಾಕರಿಸಿದರು.

ರಾಹುಲ್ ಗಾಂಧಿ ತಮ್ಮ ನಿಲುವಿನಲ್ಲಿ ದೃಢವಾಗಿದ್ದರು. ನಾನು ಕ್ಷಮೆ ಯಾಚಿಸುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ನ್ಯಾಯಾಲಯ ವಿಧಿಸುವ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದರು.

"ರಾಹುಲ್ ಗಾಂಧಿ ವಿಮಾನ ನಿಲ್ದಾಣದಿಂದ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ, ಹಿರಿಯ ವಕೀಲರು ಅವರಿಗೆ ಇದು ಗಂಭೀರ ಅಪರಾಧವಲ್ಲ. ನ್ಯಾಯಾಲಯದಲ್ಲಿ ಕ್ಷಮೆಯಾಚಿಸಿದರೆ ಸಾಕು. ನ್ಯಾಯಾಲಯ ನಿಮ್ಮನ್ನು ಕ್ಷಮಿಸಬಹುದು ಮತ್ತು ಯಾವುದೇ ಶಿಕ್ಷೆಯಾಗುವುದಿಲ್ಲ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ರಾಹುಲ್ ಗಾಂಧಿ ಕ್ಷಮೆಯಾಚಿಸಲು ನಿರಾಕರಿಸಿದರು ಎಂದು ಸೂರತ್‌ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಹುಲ್ ಗಾಂಧಿ ಅವರ ಜಾಮೀನಿಗೆ ಖಾತರಿ ನೀಡಿದ್ದ ಹಸ್ಮುಖ್ ದೇಸಾಯಿ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ವಕೀಲರು ರಾಹುಲ್ ಗಾಂಧಿ ಮನವೊಲಿಸಲು ವಿಫಲವಾದ ನಂತರ, ಕೆಲವು ನಾಯಕರು ನ್ಯಾಯಾಲಯದ ಹೊರಗೆ ಅವರ ಮನವೊಲಿಸಲು ಪ್ರಯತ್ನಿಸಿದರು ಎಂದು ಹಸ್ಮುಖ್ ದೇಸಾಯಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT