ಫಾರೂಕ್‌ ಅಬ್ದುಲ್ಲಾ‌ 
ದೇಶ

ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್‌ ಅಬ್ದುಲ್ಲಾ‌

ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರುಖ್‌ ಅಬ್ದುಲ್ಲಾ ಅವರು ಹೇಳಿದ್ದಾರೆ.

ಶ್ರೀನಗರ: ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರುಖ್‌ ಅಬ್ದುಲ್ಲಾ ಅವರು ಹೇಳಿದ್ದಾರೆ.

ಗುರುವಾರ ಉದಯಪುರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷ ಅಧಿಕಾರದಲ್ಲಿ ಉಳಿಯಲು ರಾಮನ ಹೆಸರನ್ನು ಮಾತ್ರ ಬಳಸುತ್ತಿದೆ. ಆದರೆ, ರಾಮ ಕೇವಲ ಹಿಂದೂಗಳ ದೇವರಲ್ಲ. ಎಲ್ಲರ ದೇವರು. ಜನರಿಗೆ ದಾರಿ ತೋರಿಸಲು ಅಲ್ಲಾಹ್ ಆತನನ್ನು ಕಳುಹಿಸಿದರು ಎಂದು ಹೇಳಿದರು.

ರಾಮ ಕೇವಲ ಹಿಂದೂಗಳ ದೇವರಲ್ಲ. ದಯವಿಟ್ಟು ಈ ಕಲ್ಪನೆಯನ್ನು ನಿಮ್ಮ ಮನಸ್ಸಿನಿಂದ ಕಿತ್ತು ಹಾಕಿ. ಭಗವಂತ ರಾಮ ಪ್ರತಿಯೊಬ್ಬನಿಗೂ ದೇವರು. ಅದು ಮುಸ್ಲಿಂ ಆಗಿರಲಿ ಅಥವಾ ಕಿಶ್ಚಿಯನ್ ಆಗಿರಲಿ, ಅಮೆರಿಕನ್ ಅಥವಾ ರಷ್ಯನ್ ಆಗಿರಲಿ. ಆತನ ಮೇಲೆ ನಂಬಿಕೆಯಿರುವ ಪ್ರತಿಯೊಬ್ಬರಿಗೂ ಆತ ದೇವರಾಗುತ್ತಾನೆ ಎಂದು ತಿಳಿಸಿದರು.

ನಾವು ರಾಮನ ಭಕ್ತರು ಎಂದು ನಿಮ್ಮ ಬಳಿಗೆ ಬರುವವರು ಮೂರ್ಖರು. ಅವರು ರಾಮನ ಹೆಸರಿನಲ್ಲಿ ಲಾಭ ಪಡೆದುಕೊಳ್ಳಲು ಬಯಸುತ್ತಾರೆ. ಅವರಿಗೆ ರಾಮನ ಮೇಲೆ ಪ್ರೀತಿ ಇಲ್ಲ. ಬದಲಿಗೆ ಅಧಿಕಾರದ ಮೇಲೆ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಘೋಷಣೆಯಾದಾಗ ಅವರು ಸಾಮಾನ್ಯ ಜನರ ಗಮನ ಬೇರೆಡೆಗೆ ತಿರುಗಿಸಲು ರಾಮ ಮಂದಿರವನ್ನು ಉದ್ಘಾಟಿಸುತ್ತಿದ್ದಾರೆ ಎಂಬುದು ತಿಳಿದುಬರುತ್ತದೆ. ಆದ್ದರಿಂದ ದಯವಿಟ್ಟು ಜನರ ನಡುವೆ ಹೋಗಿ ದ್ವೇಷದ ಪ್ರಚಾರವನ್ನು ನಿಲ್ಲಿಸಲು ಮನವಿ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT