ಕಟ್ಟಡಕ್ಕೆ ಅಪ್ಪಳಿಸಿದ ಗ್ಲೈಡರ್ ವಿಮಾನ 
ದೇಶ

ವೈರಲ್ ವಿಡಿಯೋ: ಮನೆ ಮೇಲೆ ಬಿದ್ದ ಗ್ಲೈಡರ್ ವಿಮಾನ, ಬಾಲಕ ಸೇರಿ ಇಬ್ಬರಿಗೆ ಗಾಯ

ಖಾಸಗಿ ಲಘು ವಿಮಾನವೊಂದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾರ್ಖಂಡ್: ಖಾಸಗಿ ಲಘು ವಿಮಾನವೊಂದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾರ್ಖಂಡ್ ನ ಧನ್ಬಾದ್ ನಲ್ಲಿ ಈ ಘಟನೆ ನಡೆದಿದ್ದು, ಈ ಆಕಸ್ಮಿಕ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಘು ವಿಮಾನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪರಿಣಾಮ ಬಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಗುರುವಾರ ಜಾರ್ಖಂಡ್ ರಾಜ್ಯದ ಧನ್ಬಾದ್ ನ ಬಿರ್ಸಾ ಮುಂಡಾ ಪಾರ್ಕ್ ಸಮೀಪ ಸಂಭವಿಸಿದೆ.

ವರದಿಯ ಪ್ರಕಾರ, ಲಘು ವಿಮಾನ ನಿಯಂತ್ರಣ ತಪ್ಪಿ ನಿಲೇಶ್ ಕುಮಾರ್ ಎಂಬವರ ಮನೆ ಮೇಲೆ ಬಿದ್ದಿದ್ದು, ಈ ಸಂದರ್ಭದಲ್ಲಿ ಅವರ ಇಬ್ಬರು ಮಕ್ಕಳು ಆಟವಾಡುತ್ತಿದ್ದು ಪವಾಡ ಸದೃಶವೆಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ ಮತ್ತು ಬಾಲಕ ಸೇರಿ ಇಬ್ಬರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

14 ವರ್ಷದ ಕುಶ್ ಸಿಂಗ್ ಎಂಬ ಬಾಲಕ ಪಾಟ್ನಾದಿಂದ ಧನ್ಬಾದ್ ನಲ್ಲಿರುವ ತನ್ನ ಚಿಕ್ಕಪ್ಪ ಪವನ್ ಸಿಂಗ್ ಮನೆಗೆ ಬಂದಿದ್ದ. ಈ ಸಂದರ್ಭದಲ್ಲಿ ಖಾಸಗಿ ಏಜೆನ್ಸಿಯನ್ನು ಸಂಪರ್ಕಿಸಿ, ಲಘು ವಿಮಾನದಲ್ಲಿ ಜಾಲಿ ರೈಡ್ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪೈಲಟ್ ಮತ್ತು ಕುಶ್ ಸಿಂಗ್ ನನ್ನು ಜಾರ್ಖಂಡ್ ನ ಅಸರ್ಫಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬಾರ್ವಡ್ಡಾ ಏರ್‌ಸ್ಟ್ರಿಪ್‌ನಿಂದ ಸಂಜೆ 4.50 ರ ಸುಮಾರಿಗೆ ವಿಮಾನ ಟೇಕಾಫ್ ಆದ ನಂತರ ಜಾಯ್‌ರೈಡ್ ಗ್ಲೈಡರ್ ವಿಮಾನ ಕಟ್ಟಡದ ಮೇಲೆ ಬಿದ್ದಿದೆ. ಜಾಯ್‌ರೈಡ್ ಗ್ಲೈಡರ್ ಟೇಕಾಫ್ ಆದ ಕೂಡಲೇ ಧನ್‌ಬದಾದ್‌ನ ಬಿರ್ಸಾ ಮುಂಡಾ ಪಾರ್ಕ್ ಬಳಿ ನೀಲೇಶ್ ಕುಮಾರ್ ಎಂಬುವರ ಮನೆಯ ಮೇಲೆ ಬಿದ್ದಿದೆ. ಆದರೆ, ಕಟ್ಟಡದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಇಬ್ಬರು ಮಕ್ಕಳು ಅಲ್ಲಿ ಆಟವಾಡುತ್ತಿದ್ದರು ಆದರೆ ಹತ್ತಿರ ಕ್ಷೌರ ಮಾಡಿಕೊಂಡಿದ್ದರು ಎಂದು ಬರ್ಬಡ್ಡಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಆಶಿಶ್ ಕುಮಾರ್ ಯಾದವ್ ಹೇಳಿದ್ದಾರೆ.

ಲಘು ವಿಮಾನದಲ್ಲಿದ್ದ ಕ್ಯಾಮರಾದಲ್ಲಿ ಈ ಘಟನೆ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ