ಪ್ರಧಾನಿ ಮೋದಿ 
ದೇಶ

ಪ್ರಾಜೆಕ್ಟ್ ಟೈಗರ್‌ಗೆ 50 ವರ್ಷ: ಏಪ್ರಿಲ್ 9ರಂದು ಮೈಸೂರಿನಲ್ಲಿ 3 ದಿನಗಳ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಾಜೆಕ್ಟ್ ಟೈಗರ್‌ನ ಸುವರ್ಣ ವರ್ಷದ ಸಂಭ್ರಮವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಮೈಸೂರಿಗೆ ಆಗಮಿಸಲಿದ್ದು 3 ದಿನಗಳ ಮೆಗಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಪ್ರಾಜೆಕ್ಟ್ ಟೈಗರ್‌ನ ಸುವರ್ಣ ವರ್ಷದ ಸಂಭ್ರಮವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಮೈಸೂರಿಗೆ ಆಗಮಿಸಲಿದ್ದು 3 ದಿನಗಳ ಮೆಗಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಜೆಕ್ಟ್ ಟೈಗರ್ ಹುಲಿ ಸಂರಕ್ಷಣಾ ಕಾರ್ಯಕ್ರಮವಾಗಿದ್ದು, ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕಾರಾವಧಿಯಲ್ಲಿ ಭಾರತ ಸರ್ಕಾರವು 1973 ರ ನವೆಂಬರ್ ನಲ್ಲಿ ಪ್ರಾರಂಭಿಸಿತು.

"ಪ್ರಾಜೆಕ್ಟ್ ಟೈಗರ್‌ನ 50 ನೇ ವಾರ್ಷಿಕೋತ್ಸವವನ್ನು ಗುರುತಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪ್ರಮುಖ ಆಚರಣೆಯನ್ನು ಆಯೋಜಿಸಿದೆ. ಏಪ್ರಿಲ್ 9ರಂದು ಕರ್ನಾಟಕದ ಮೈಸೂರಿನಲ್ಲಿ ನಡೆಯುವ ಮೆಗಾ ಕಾರ್ಯಕ್ರಮದ ಉದ್ಘಾಟನಾ ಅಧಿವೇಶನಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದರು. 

ಈ ಸಂದರ್ಭದಲ್ಲಿ, ಹುಲಿ ಗಣತಿಯ ಹೊರತಾಗಿ, ಸ್ಮರಣಾರ್ಥ ನಾಣ್ಯ ಬಿಡುಗಡೆಯನ್ನು ಸಹ ಪ್ರಸ್ತಾಪಿಸಲಾಗಿದೆ ಎಂದು ಹೇಳಲಾಗುತ್ತದೆ.

"ಪ್ರಾಜೆಕ್ಟ್ ಟೈಗರ್ ತನ್ನ 50 ನೇ ವಾರ್ಷಿಕೋತ್ಸವವನ್ನು ಏಪ್ರಿಲ್ 1, 2023 ರಂದು ಅಮೃತಕಾಲ ಸಮಯದಲ್ಲಿ ಆಚರಿಸುತ್ತದೆ, ಇದು ಶಾಂತಿ, ಸಮೃದ್ಧಿ, ಅಭಿವೃದ್ಧಿ ಮತ್ತು ಸಂರಕ್ಷಣೆಯನ್ನು ಪ್ರಧಾನ ಮಂತ್ರಿಯವರ ಮಿಷನ್ ಲೈಫ್ ದೃಷ್ಟಿಗೆ ಅನುಗುಣವಾಗಿ ಸೂಚಿಸುತ್ತದೆ. ಹುಲಿ ಸಂರಕ್ಷಣೆಯಲ್ಲಿ ಭಾರತದ ಸಾಧನೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಹುಲಿ ಸಂರಕ್ಷಣೆಗೆ ರಾಜಕೀಯ ಮತ್ತು ಜನಪ್ರಿಯ ಬೆಂಬಲವನ್ನು ಹೆಚ್ಚಿಸಿ, 2023ರಲ್ಲಿ ಪ್ರಾಜೆಕ್ಟ್ ಟೈಗರ್‌ನ 50 ನೇ ವಾರ್ಷಿಕೋತ್ಸವವನ್ನು ಗೌರವಿಸಲು ಪ್ರಮುಖ ಕಾರ್ಯಕ್ರಮವನ್ನು ನಡೆಸಬೇಕು ಎಂದು ಅಧಿಕಾರಿ ಹೇಳಿದರು. ಹುಲಿ ಗಣತಿಯ ಜೊತೆಗೆ, ಸ್ಮರಣಾರ್ಥ ನಾಣ್ಯ ಬಿಡುಗಡೆಯನ್ನು ಸಹ ಈ ಸಂದರ್ಭದಲ್ಲಿ ಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT