ನವದೆಹಲಿ: ಲೋಕಸಭೆಯಿಂದ ಅನರ್ಹಗೊಂಡ ನಂತರ ಶನಿವಾರ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಉಪನಾಮ' ಪ್ರಕರಣದಲ್ಲಿ ಶಿಕ್ಷೆಯ ಬಗ್ಗೆ ಪ್ರಶ್ನಿಸುತ್ತಿದ್ದ ಪತ್ರಕರ್ತನ ವಿರುದ್ಧ ಕೋಪಗೊಂಡ ಪ್ರಸಂಗ ನಡೆಯಿತು.
“ಪತ್ರಕರ್ತನಂತೆ ನಟಿಸಬೇಡಿ. ನೀವು ಏಕೆ ಉತ್ತಮ ಪ್ರಶ್ನೆ ಕೇಳಬಾರದು? ನೀವು ಬಿಜೆಪಿಗಾಗಿ ಕೆಲಸ ಮಾಡುತ್ತೀರಿ ಎಂಬುದು ಸ್ಪಷ್ಟವಾಗಿದೆ. ಉತ್ತಮ ವಿಧಾನದೊಂದಿಗೆ ಪ್ರಶ್ನೆಗಳನ್ನು ಏಕೆ ಕೇಳುತ್ತಿಲ್ಲ ಎಂದರು.
ಇದನ್ನೂ ಓದಿ: ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿ
ಪತ್ರಕರ್ತ ಪ್ರಶ್ನೆ ಕೇಳುವುದನ್ನು ನಿಲ್ಲಿಸಿದ ನಂತರ, ಹವಾ ನಿಕಲ್ ಗಯಿ? ಎಂದು ಹೇಳುವ ಮೂಲಕ ಗಾಂಧಿ ಅವರನ್ನು ಲೇವಡಿ ಮಾಡಿದರು.