ತೇಜಸ್ವಿ ಯಾದವ್ 
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಿಬಿಐ ಮುಂದೆ ವಿಚಾರಣೆಗೆ ಹಾಜರು

ಈ ಹಿಂದೆ ಮೂರು ವಿಚಾರಣೆ ದಿನಾಂಕಗಳಿಂದ ದೂರವುಳಿದಿದ್ದ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಶನಿವಾರ ಇಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಈ ಹಿಂದೆ ಮೂರು ವಿಚಾರಣೆ ದಿನಾಂಕಗಳಿಂದ ದೂರವುಳಿದಿದ್ದ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಶನಿವಾರ ಇಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 10.30ರ ಸುಮಾರಿಗೆ ದೆಹಲಿಯ ಸಿಬಿಐ ಪ್ರಧಾನ ಕಛೇರಿಗೆ ಆಗಮಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕನನ್ನು ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ತನಿಖಾ ತಂಡದ ಎದುರು ಕರೆದೊಯ್ಯಲಾಯಿತು. ಈ ತಿಂಗಳು ಯಾದವ್ ಅವರನ್ನು ಬಂಧಿಸುವುದಿಲ್ಲ ಎಂದು ಸಿಬಿಐ ಕಳೆದ ವಾರ ದೆಹಲಿ ಹೈಕೋರ್ಟ್‌ಗೆ ಭರವಸೆ ನೀಡಿತ್ತು.

ಆರ್‌ಜೆಡಿ ನಾಯಕನ ಪರ ವಕೀಲ ಮಣಿಂದರ್ ಸಿಂಗ್ ಪ್ರಕಾರ, ಈಗ ನಡೆಯುತ್ತಿರುವ ಬಿಹಾರ ವಿಧಾನಸಭೆ ಅಧಿವೇಶನವು ಏಪ್ರಿಲ್ 5 ರಂದು ಮುಕ್ತಾಯಗೊಳ್ಳಲಿರುವುದರಿಂದ ವಿಚಾರಣೆಗೆ ಹಾಜರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಯಾದವ್ ಅವರು ತನಿಖಾ ಸಂಸ್ಥೆಗೆ ತಿಳಿಸಿದ್ದರು. ಸಿಂಗ್ ಅವರು ಈ ವಿಚಾರವನ್ನು ನ್ಯಾಯಾಲಯಕ್ಕೆ ತಿಳಿಸಿದ್ದರು. 

ಶನಿವಾರದಂದು ವಿಧಾನಸಭೆಯ ಅಧಿವೇಶನವನ್ನು ಕರೆಯಲಾಗುವುದಿಲ್ಲ. ಹೀಗಾಗಿ, ಯಾದವ್ ಅವರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಮಾರ್ಚ್‌ನಲ್ಲಿ ಯಾವುದೇ ಶನಿವಾರದಂದು ಏಜೆನ್ಸಿಯ ಮುಂದೆ ವಿಚಾರಣೆಗೆ ಹಾಜರಾಗಬಹುದು ಎಂದು ಸಿಬಿಐ ಪರ ವಕೀಲ ಡಿಪಿ ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು. 

ಆರ್‌ಜೆಡಿ ನಾಯಕ ತನ್ನ ವಿರುದ್ಧ ಫೆಬ್ರುವರಿ 28, ಮಾರ್ಚ್ 4 ಮತ್ತು ಮಾರ್ಚ್ 11 ರಂದು ನೀಡಲಾದ ಸಮನ್ಸ್‌ಗಳನ್ನು ರದ್ದುಗೊಳಿಸುವಂತೆ ಕೋರಿದ್ದರು.

ಮಾರ್ಚ್ 15 ರಂದು ಸಿಬಿಐ ವಿಶೇಷ ನ್ಯಾಯಾಲಯವು ಯಾದವ್ ಅವರ ತಂದೆ ಲಾಲು ಪ್ರಸಾದ್, ತಾಯಿ ರಾಬ್ರಿ ದೇವಿ, ಸಹೋದರಿ ಮಿಸಾ ಭಾರತಿ ಮತ್ತು ಇತರರಿಗೆ ಉದ್ಯೋಗಕ್ಕಾಗಿ ಭೂ ಹಗರಣದ ಪ್ರಕರಣದಲ್ಲಿ ಜಾಮೀನು ನೀಡಿತು.

ಅಧಿಕಾರಿಗಳ ಪ್ರಕಾರ, ಯಾದವ್ ಕುಟುಂಬ ಮತ್ತು ಇತರರ ವಿರುದ್ಧ ನಡೆಯುತ್ತಿರುವ ತನಿಖೆಯು ಸಿಬಿಐ ಮೊದಲ ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಹೊರಬಿದ್ದ ದಾಖಲೆಗಳು ಮತ್ತು ಪುರಾವೆಗಳ ಭಾಗವಾಗಿದೆ ಮತ್ತು ಆರಂಭಿಕ ವರದಿಯನ್ನು ಸಲ್ಲಿಸುವ ವೇಳೆಗೆ ಆರೋಪಿಗಳ ಆಪಾದಿತ ಪಾತ್ರಗಳ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗದಿದ್ದರಿಂದಲೂ ತನಿಖೆ ನಡೆಯುತ್ತಿದೆ. 

ತನಿಖಾ ಸಂಸ್ಥೆಯು ನಡೆಸುತ್ತಿರುವ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಹೊಸ ಮಾಹಿತಿಯ ಆಧಾರದ ಮೇಲೆ 'ಹೆಚ್ಚಿನ ತನಿಖೆ'ಯ ಭಾಗವಾಗಿ ಆರೋಪಿಗಳ ಹೊಸ ಸುತ್ತಿನ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2004 ರಿಂದ 2009ರ ಯುಪಿಎ ಸರ್ಕಾರದಲ್ಲಿ ಲಾಲು ಪ್ರಸಾದ್ ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಯಾವುದೇ ಜಾಹೀರಾತು ಅಥವಾ ಸಾರ್ವಜನಿಕ ಸೂಚನೆ ಇಲ್ಲದೆ, ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ನೆಚ್ಚಿನ ಅಭ್ಯರ್ಥಿಗಳನ್ನು ರೈಲ್ವೆಯಲ್ಲಿ ನೇಮಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ. ಮುಂಬೈ, ಜಬಲ್‌ಪುರ್, ಕೋಲ್ಕತ್ತಾ, ಜೈಪುರ ಮತ್ತು ಹಾಜಿಪುರದಲ್ಲಿರುವ ವಿವಿಧ ವಲಯ ರೈಲ್ವೆಗಳಲ್ಲಿ ಪಾಟ್ನಾದಿಂದ ಬದಲಿಗಳನ್ನು ನೇಮಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಅಭ್ಯರ್ಥಿಗಳು ನೇರವಾಗಿ ಅಥವಾ ಅವರ ಹತ್ತಿರದ ಕುಟುಂಬದ ಸದಸ್ಯರ ಮೂಲಕ ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಭೂಮಿಯನ್ನು ಮಾರಾಟ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT