ಮನೀಶ್ ಸಿಸೋಡಿಯಾ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಏಪ್ರಿಲ್ 5ಕ್ಕೆ ಮುಂದೂಡಿದ ಕೋರ್ಟ್

ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.

ನವದೆಹಲಿ: ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.

ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿಗೆ ಸಲ್ಲಿಸಿದ ಇ.ಡಿ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಯ ಕೋರಿದ ನಂತರ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ವಿಚಾರಣೆಯನ್ನು ಮುಂದೂಡಿದರು.

ಈ ವಿಚಾರದಲ್ಲಿ ವಿವರವಾದ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಸಿಸೋಡಿಯಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಮಾರ್ಚ್ 9 ರಂದು ಇ.ಡಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿತು. ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಇರಿಸಲಾಗಿತ್ತು.

2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26 ರಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಸಿಬಿಐ ಬಂಧಿಸಿತು.

ಸಿಬಿಐ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್ 31 ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಶುಕ್ರವಾರ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT