2018ರಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿಯನ್ನು ಸಂತೈಸುತ್ತಿರುವ ಯುಡಿಪಿ ನಾಯಕರ ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ!

ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್‌ನಿಂದ ಹೊಡೆದಿದ್ದರಿಂದ  ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ.  ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ.

ಕೊಚ್ಚಿ: ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್‌ನಿಂದ ಹೊಡೆದಿದ್ದರಿಂದ  ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ.  ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ.

ಕುಟುಂಬಕ್ಕೆ ಏಕೈಕ ಜೀವನಾಧಾರವಾಗಿದ್ದ ಅವರನ್ನು ಪೊಲೀಸ್ ಠಾಣೆಗೆ ಎಳೆದೊಯ್ದ ಒಂದು ಗಂಟೆಯೊಳಗೆ ಎರ್ನಾಕುಲಂ ಮೆಡಿಕಲ್ ಟ್ರಸ್ಟ್‌ನಲ್ಲಿ ಮೃತಪಟ್ಟಿರುವುದಾಗಿ ಪ್ರಕಟಿಸಲಾಗಿದೆ. ಸಣ್ಣ ಬಿಡಿ ಭಾಗಗಳ ಅಂಗಡಿ ನಡೆಸುತ್ತಿದ್ದ ಮನೋಹರನ್ ಕುಡಿದು ಅಜಾಗರೂಕತೆಯಿಂದ ವಾಹನ ಚಲಾಯಿಸದಿದ್ದರೂ ಅವರನ್ನು ಠಾಣೆಗೆ ಎಳೆದೊಯ್ಯಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಪಾಸಣೆಯ ವೇಳೆ ಮನೋಹರನ್ ಅವರ ಮುಖಕ್ಕೆ ಕಪಾಳಮೋಕ್ಷ ಮಾಡಿದ ಸಬ್ ಇನ್ಸ್‌ಪೆಕ್ಟರ್ ಜಿಮ್ಮಿ ಜೋಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಸಬ್ ಇನ್ಸ್ ಪೆಕ್ಟರ್ ಅವರ ಅನುಚಿತ ವರ್ತನೆ ಒಪ್ಪತಕ್ಕದ್ದಲ್ಲ ಎಂದಿರುವ  ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ ಸೇತು ರಾಮನ್ , ಮನೋಹರನ್ ಕುಡಿದು ವಾಹನ ಚಲಾಯಿಸಿದ್ದು ಕಂಡುಬಂದಿಲ್ಲ. ಘಟನೆಯ ತನಿಖೆಯನ್ನು ನಗರ ಅಪರಾಧ ವಿಭಾಗದ ಡಿವೈಎಸ್ಪಿಗೆ ವಹಿಸಲಾಗಿದೆ. ಸಾವಿನ ಹಿಂದಿರುವ ನಿಜವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದುಬರಲಿದೆ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಈ ಮಧ್ಯೆ ಕಸ್ಟಡಿ ಸಾವು ಪ್ರಕರಣ ರಾಜಕೀಯ ಸ್ವರೂಪ ಪಡೆದಿದ್ದು, ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್‌ನಿಂದ ದೌರ್ಜನ್ಯದ ಬಗ್ಗೆ ನನಗೆ ಆಗಾಗ್ಗೆ ದೂರುಗಳು ಬರುತ್ತವೆ ಎಂದು  ಸ್ಥಳೀಯ ಶಾಸಕ ಅನೂಪ್ ಜೇಕಬ್ ಹೇಳಿದ್ದಾರೆ. 

ಸಬ್ ಇನ್ಸ್ ಪೆಕ್ಟರ್ ಅವರನ್ನು ಕೇವಲ ಅಮಾನತು ಮಾಡಿದರೆ ಸಾಲದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ಆಗ್ರಹಿಸಿದ್ದಾರೆ.  ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಪೊಲೀಸ್ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದವು. ಪ್ರತಿಭಟನಾ ಮೆರವಣಿ ಹಿನ್ನೆಲೆಯಲ್ಲಿ ಯಾವುದೇ ಹಿಂಸಾಚಾರ ನಡೆಯದಂತೆ ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆ ಎದುರು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT