ಕೊಕ್ಕರೆಯೊಂದಿಗೆ ಉತ್ತರ ಪ್ರದೇಶದ ವ್ಯಕ್ತಿ 
ದೇಶ

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೇಥಿ: ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೇಥಿ ಜಿಲ್ಲೆಯ ಮಂಡ್ಖಾ ಗ್ರಾಮದಲ್ಲಿ ಆರಿಫ್ ಖಾನ್ ಗುರ್ಜರ್ ಅವರೊಂದಿಗೆ ಕೊಕ್ಕರೆ ವಾಸಿಸುತ್ತಿತ್ತು.  'ಕುಟುಂಬದ ಸದಸ್ಯರಂತೆ' ಸ್ವೀಕರಿಸಿದ್ದ ಕ್ರೇನ್ ಅನ್ನು ಮಾರ್ಚ್ 21ರಂದು ಅರಣ್ಯ ಇಲಾಖೆ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು.

ಈ ಪಕ್ಷಿಯನ್ನು ರಾಯ್ ಬರೇಲಿಯ ಸಮಸ್ಪುರ್ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗಿದ್ದು, ಅದರ ನೈಸರ್ಗಿಕ ಪರಿಸರದಲ್ಲಿ ವಾಸಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ, ಇಲಾಖೆಯು ಗುರ್ಜರ್‌ಗೆ ನೋಟಿಸ್ ಜಾರಿ ಮಾಡಿತು ಮತ್ತು ಅವರ ಹೇಳಿಕೆಯನ್ನು ದಾಖಲಿಸಲು ಏಪ್ರಿಲ್ 4 ರಂದು ಗೌರಿಗಂಜ್ ವಿಭಾಗೀಯ ಅರಣ್ಯಾಧಿಕಾರಿಗಳ ಕಚೇರಿಗೆ ಹಾಜರಾಗುವಂತೆ ತಿಳಿಸಿದೆ.

ಸಹಾಯಕ ವಿಭಾಗೀಯ ಅರಣ್ಯಾಧಿಕಾರಿ (ಗೌರಿಗಂಜ್) ರಣವೀರ್ ಸಿಂಗ್ ಅವರು ನೀಡಿರುವ ನೋಟಿಸ್ ಪ್ರಕಾರ, ಗುರ್ಜರ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಕ್ಕಿಯನ್ನು ಕೊಂಡೊಯ್ದ ಒಂದು ದಿನದ ನಂತರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದರು ಮತ್ತು ಪ್ರಧಾನಿ ನಿವಾಸದಲ್ಲಿರುವ ನವಿಲುಗಳನ್ನು ತೆಗೆದುಕೊಂಡು ಹೋಗಲು ಯಾವುದೇ ಅಧಿಕಾರಿಗೆ ಧೈರ್ಯವಿದೆಯೇ ಎಂದು ಪರೋಕ್ಷವಾಗಿ ಪ್ರಶ್ನಿಸಿದರು.

ಯಾದವ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ಅರಣ್ಯಾಧಿಕಾರಿ ಡಿಎನ್ ಸಿಂಗ್, 'ನಾವೀಗ ಯಾವುದೇ ಕ್ರಮ ಕೈಗೊಂಡಿದ್ದರೂ, ಅದು ಆರಿಫ್ (ಗುರ್ಜರ್) ಒಪ್ಪಿಗೆಯೊಂದಿಗೆ ತೆಗೆದುಕೊಂಡಿದ್ದೇವೆ' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT