ಉದ್ಧವ್ ಠಾಕ್ರೆ ಮತ್ತು ರಾಹುಲ್ ಗಾಂಧಿ. 
ದೇಶ

ಸಾವರ್ಕರ್ ನಮ್ಮ ಆರಾಧ್ಯ ದೈವ, ಅವಮಾನಿಸಿದರೆ ಸಹಿಸಲ್ಲ: ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ

ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್‌ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ.

ಮಲೇಗಾಂವ್: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್‌ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ.

ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ. ‘ನನ್ನ ಹೆಸರು ಸಾವರ್ಕರ್‌ ಅಲ್ಲ. ನನ್ನ ಗೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ‘ ಎಂದು ಹೇಳಿದ್ದರು.

ಮಾಲೆಗಾಂವ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಉದ್ಧವ್ ಠಾಕ್ರೆಯವರು, ರಾಹುಲ್ ಗಾಂಧಿಯವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.

ಸಾವರ್ಕರ್ ಅವರು ನಮ್ಮ ಆರಾಧ್ಯ ದೈವ. ಅವರಿಗೆ ಮಾಡುವ ಅವಮಾನ ಸಹಿಸಲು ಸಾಧ್ಯವಿಲ್ಲ. ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಎಂಬ ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಪ್ರಜಾಪ್ರಭುತ್ವವನ್ನು ರಕ್ಷಿಸಲು ರಚಿಸಲಾಗಿದೆ ಮತ್ತು ಅದಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದು ಅಗತ್ಯವಾಗಿದೆ. ಸಾವರ್ಕರ್‌ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ಹೇಳಿದರು.

ಸಾವರ್ಕರ್ ನಮ್ಮ ಆರಾಧ್ಯ ದೈವ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಾಗಿದೆ. ಆದರೆ,  ಸಾವರ್ಕರ್ ಅವರ ಅವಮಾನವನ್ನು ಸಹಿಸಲಾಗುವುದಿಲ್ಲ. ಸಾವರ್ಕರ್ ಅವರು 14 ವರ್ಷಗಳ ಕಾಲ ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಊಹಿಸಲಾಗದ ಚಿತ್ರಹಿಂಸೆಯನ್ನು ಅನುಭವಿಸಿದರು. ಅವರ ನೋವುಗಳನ್ನು ನಾವು ಓದಬಹುದು. ಆದರೆ, ಇದು ತ್ಯಾಗದ ರೂಪವಾಗಿದೆ ಎಂದು ತಿಳಿಸಿದರು.

''ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಅದರ ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿ ಬಂದಿದ್ದೇವೆ. ನಿಮ್ಮನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸಲಾಗುತ್ತಿದೆ. ಈ ಸಮಯವನ್ನು ವ್ಯರ್ಥವಾಗಲು ಬಿಟ್ಟರೆ, ಪ್ರಜಾಪ್ರಭುತ್ವವು ಅಸ್ತಿತ್ವದಲ್ಲಿಲ್ಲದಂತಾಗುತ್ತದೆ. 2024 ಕೊನೆಯ ಚುನಾವಣೆಯಾಗಲಿದೆ ಎಂದು ಹೇಳಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ನಾನು ಬೆಂಬಲ ನೀಡಿದ್ದೆ. "ರಾಹುಲ್ ಗಾಂಧಿ ನಿನ್ನೆ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಚೆನ್ನಾಗಿ ಮಾತನಾಡಿದ್ದಾರೆ. 20,000 ಕೋಟಿ ರೂ. ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಪ್ರಶ್ನೆಗಳನ್ನು ಮಾಡಿದ್ದಾರೆ. ಆದರೆ, ಸರ್ಕಾರ ಈ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ ಎಂದರು.

ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು. ದೇಶದ ಸ್ವಾತಂತ್ರ್ಯ ಚಳವಳಿಯೊಂದಿಗೆ ಯಾವುದೇ ಸಂಬಂಧವಿಲ್ಲದವರು ಪ್ರಜಾಪ್ರಭುತ್ವವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯವನ್ನು ಉಳಿಸಲು ನಾನು. ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಹೋರಾಟ ಮಾಡುತ್ತಿಲ್ಲ ಎಂದರು.

ಎನ್‌ಸಿಪಿ ನಾಯಕ ಅನಿಲ್ ದೇಶ್‌ಮುಖ್ ಅವರ ಆರು ವರ್ಷದ ಮೊಮ್ಮಗಳನ್ನು ತನಿಖಾ ಸಂಸ್ಥೆಗಳು ವಿಚಾರಣೆಗೆ ಒಳಪಡಿಸಿವೆ ಮತ್ತು ಲಾಲು ಪ್ರಸಾದ್ ಯಾದವ್ ಅವರ ಗರ್ಭಿಣಿ ಸೊಸೆಯನ್ನು ಕೂಡ ಮೂರ್ಛೆ ಹೋಗುವವರೆಗೂ ಪ್ರಶ್ನಿಸಲಾಗಿದೆ. ಅಧಿಕಾರದಲ್ಲಿರುವವರನ್ನು ಟೀಕಿಸಿದರೆ ಪೊಲೀಸರು ನಿಮ್ಮ ಬೆನ್ನತ್ತುತ್ತಾರೆ. ಭಾರತವೆಂದರೆ ಮೋದಿಯಲ್ಲ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಇದಕ್ಕಾಗಿ ತಮ್ಮ ಪ್ರಾಣ ತೆತ್ತರೇ? ಎಂದು ಪ್ರಶ್ನಿಸಿದರು.

ಬಳಿಕ ಸಿಎಂ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ ಠಾಕ್ರೆ, ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಕ್ಕೆ ಪಶ್ಚಾತ್ತಾಪ ಪಡುವುದಿಲ್ಲ, ಆದರೆ, ಒಳ್ಳೆಯ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾಚಿಕೆಯಿಲ್ಲದೆ ಉರುಳಿಸಲಾಯಿತು ಎಂದು ಕಿಡಿಕಾರಿದರು.

‘ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಶಿಂಧೆ ಸರ್ಕಾರ ಅವರ ಸಮಸ್ಯೆಗಳನ್ನು ನಿವಾರಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.

ನಮ್ಮ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಸಿದುಕೊಂಡಿದ್ದಾರೆ, ಆದರೆ, ದೇಶದ್ರೋಹಿಗಳು ಎಂದಿಗೂ ಜನರ ಪ್ರೀತಿ ಮತ್ತು ಪ್ರೀತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

"ಸಾಂಕ್ರಾಮಿಕ ಸಮಯದಲ್ಲಿ, ನಾನು ಮಾಲೆಗಾಂವ್‌ನಲ್ಲಿನ ಧಾರ್ಮಿಕ ಮುಖ್ಯಸ್ಥರೊಂದಿಗೆ ಮಾತನಾಡಿದ್ದೆ. ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಕಷ್ಟು ಉಪಕ್ರಮಗಳ ಕೈಗೊಳ್ಳಲಾಗಿತ್ತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT