ಪಳನಿಸ್ವಾಮಿ 
ದೇಶ

ಒಪಿಎಸ್ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಪಳನಿಸ್ವಾಮಿ ನೇಮಕ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಮಂಗಳ ವಾರ ನಿರಾಕರಿಸಿದ ಬೆನ್ನಲ್ಲೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರನ್ನು ಎಐಎಡಿಎಂಕೆ ನೂತನ ಪ್ರಧಾನ...

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಮಂಗಳ ವಾರ ನಿರಾಕರಿಸಿದ ಬೆನ್ನಲ್ಲೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರನ್ನು ಎಐಎಡಿಎಂಕೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಪ್ರತಿಸ್ಪರ್ಧಿ ಒ ಪನ್ನೀರಸೆಲ್ವಂ(ಒಪಿಎಸ್)ನೇತೃತ್ವದ ಬಣ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ಮದ್ರಾಸ್ ಹೈಕೋರ್ಟ್ ತೀರ್ಪಿನ ನಂತರ ಸಮಯ ವ್ಯರ್ಥ ಮಾಡದೆ, ಎಐಎಡಿಎಂಕೆ ಚುನಾವಣಾ ಆಯುಕ್ತರಾದ ನಾಥಮ್ ಆರ್ ವಿಶ್ವನಾಥನ್ ಮತ್ತು ಪೊಲ್ಲಾಚಿ ವಿ ಜಯರಾಮನ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ 68 ವರ್ಷದ ಪಳನಿಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಪಕ್ಷದ ಪದಾಧಿಕಾರಿಗಳು ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.

ಪಕ್ಷದ ಸಂಸ್ಥಾಪಕ ಎಂಜಿ ರಾಮಚಂದ್ರನ್(ಎಂಜಿಆರ್) ಮತ್ತು ದಿವಂಗತ ಪಕ್ಷದ ವರಿಷ್ಠೆ ಜೆ ಜಯಲಲಿತಾ ಅವರು ಹೊಂದಿದ್ದ ಪಕ್ಷದ ಸರ್ವಶಕ್ತ ಹುದ್ದೆಯಾಗಿರುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುವುದಾಗಿ ಪಳನಿಸ್ವಾಮಿ ಹೇಳಿದ್ದಾರೆ.

ಎಐಎಡಿಎಂಕೆ ಪಕ್ಷದ ಆಂತರಿಕ ಚುನಾವಣಾ ಫಲಿತಾಂಶದ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!