ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಇ.ಡಿ. ಯಿಂದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪಿಎ ವಿಚಾರಣೆ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ (ಪಿಎ) ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ (ಪಿಎ) ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸುತ್ತಿದೆ.

ಹಣ ಅಕ್ರಮ ವರ್ಗಾವಣೆ ವಿರೋಧಿ ಸಂಸ್ಥೆಯು ಮತ್ತೆ ತನಿಖೆಗೆ ಹಾಜರಾಗುವಂತೆ ಶರ್ಮಾ ಅವರಿಗೆ ಸೂಚಿಸಿತ್ತು. ಅದರಂತೆ, ವಿಚಾರಣೆಗೆ ಹಾಜರಾಗಿದ್ದು, ಸದ್ಯ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಬಾರಿ ಅವರು ಮನೀಶ್ ಸಿಸೋಡಿಯಾ ಅವರೊಂದಿಗೆ ವಿಚಾರಣೆಯನ್ನು ಎದುರಿಸಿದ್ದರು. ಮಾಜಿ ಕಾರ್ಯದರ್ಶಿ ಸಿ.ಅರವಿಂದ್, ಅಬಕಾರಿ ಕಾರ್ಯದರ್ಶಿ ಅರವ ಗೋಪಿ ಕೃಷ್ಣ ಮತ್ತು ಸಂಜಯ್ ಗೋಯಲ್ ಅವರನ್ನು ಒಟ್ಟಿಗೆ ವಿಚಾರಣೆ ನಡೆಸುವುದಾಗಿ ಇ.ಡಿ ಈ ಹಿಂದೆಯೇ ನ್ಯಾಯಾಲಯಕ್ಕೆ ತಿಳಿಸಿತ್ತು.

ಈ ಪ್ರಕರಣದಲ್ಲಿ ಇ.ಡಿ ಇದೀಗ ಒಂದು ಚಾರ್ಜ್ ಶೀಟ್ ಮತ್ತು ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ. ಶೀಘ್ರದಲ್ಲೇ ಎರಡನೇ ಪೂರಕ ಚಾರ್ಜ್ ಶೀಟ್ ಸಲ್ಲಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅವನನ್ನು ಗಲ್ಲಿಗೇರಿಸುವವರೆಗೂ ಹೋರಾಟ': ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ

ಭಾರತೀಯ ಸೇನೆಗೆ 79,000 ಕೋಟಿ ರೂ. ಮೌಲ್ಯದ 'ಆಧುನಿಕ ಶಸ್ತ್ರಾಸ್ತ್ರ' ಖರೀದಿಗೆ DAC ಅನುಮೋದನೆ!

ಉಕ್ರೇನ್ - ರಷ್ಯಾ ಸಮರ ಕೊನೆಗೊಳಿಸಲು ಸಭೆ: ಟ್ರಂಪ್‌ಗೆ 50 ವರ್ಷಗಳ ಭದ್ರತಾ ಗ್ಯಾರಂಟಿ ಕೇಳಿದ ಝೆಲೆನ್ಸ್ಕಿ

ರಷ್ಯಾ ಸೇನೆಗೆ ಸೇರಿದ್ದ10 ಭಾರತೀಯರ ಸಾವು: ವರದಿ

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ: 'ಭಯಾನಕ ದ್ವೇಷ' ದ ಅಪರಾಧ, BJP ವಿರುದ್ಧ ರಾಹುಲ್ ಗಾಂಧಿ ಕಿಡಿ!

SCROLL FOR NEXT