ಮಲ್ಲಿಕಾರ್ಜುನ ಖರ್ಗೆ 
ದೇಶ

ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡುವಂತೆ ರಾಹುಲ್‌ಗೆ ಸೂಚನೆ: ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ತರಾಟೆಗೆ ತೆಗೆದುಕೊಂಡರು. ತಮ್ಮ ಪಕ್ಷದ ಮಾಜಿ ಮುಖ್ಯಸ್ಥರಿಗೆ 'ಬೆದರಿಕೆ, ಹೆದರಿಕೆ ಮತ್ತು ಅವಮಾನ' ಮಾಡುವ ಸರ್ಕಾರದ ಧೋರಣೆಯನ್ನು ನಾನು ಖಂಡಿಸುತ್ತೇನೆ ಎಂದರು.

ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ತರಾಟೆಗೆ ತೆಗೆದುಕೊಂಡರು. ತಮ್ಮ ಪಕ್ಷದ ಮಾಜಿ ಮುಖ್ಯಸ್ಥರಿಗೆ 'ಬೆದರಿಕೆ, ಹೆದರಿಕೆ ಮತ್ತು ಅವಮಾನ' ಮಾಡುವ ಸರ್ಕಾರದ ಧೋರಣೆಯನ್ನು ನಾನು ಖಂಡಿಸುತ್ತೇನೆ ಎಂದರು.

ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿಯವರೊಂದಿಗೆ ಅವರ 10 ಜನಪಥ್ ನಿವಾಸಕ್ಕೆ ಹೋಗಿ ವಾಸಿಸಬಹುದು ಅಥವಾ ಗಾಂಧಿ ವಂಶಸ್ಥರಿಗೆ ಸೇರಿದ ಒಂದು ಮನೆಯನ್ನು ಖಾಲಿ ಮಾಡುವ ಮೂಲಕ ಅದರಲ್ಲೇ ವಾಸಿಸಬಹುದು ಎಂದು ಅವರು ಹೇಳಿದರು.

'ಅವರನ್ನು (ರಾಹುಲ್ ಗಾಂಧಿ) ದುರ್ಬಲಗೊಳಿಸಲು ಅವರು (ಕೇಂದ್ರ ಸರ್ಕಾರ) ಎಲ್ಲವನ್ನೂ ಮಾಡುತ್ತಾರೆ. ಅವರು ತಮ್ಮ ತಾಯಿಯೊಂದಿಗೆ ವಾಸಿಸಬಹುದು ಅಥವಾ ನನ್ನ ಮನೆಗೂ ಬರಬಹುದು. ನಾನು ಅವರಿಗೆ ಒಂದು ಮನೆಯನ್ನು ಖಾಲಿ ಮಾಡಿ ನೀಡುತ್ತೇನೆ. ಬೆದರಿಕೆ, ಹೆದರಿಕೆ ಮತ್ತು ಅವಮಾನ ಮಾಡುವ ಸರ್ಕಾರದ ಈ ಧೋರಣೆಯನ್ನು ನಾನು ಖಂಡಿಸುತ್ತೇನೆ' ಎಂದು ಖರ್ಗೆ ಸಂಸತ್ತಿಗೆ ತೆರಳುವ ಮುನ್ನ ಸುದ್ದಿಗಾರರಿಗೆ ತಿಳಿಸಿದರು.

'ಪ್ರಜಾಪ್ರಭುತ್ವದಲ್ಲಿ ಹಲವು ಬಾರಿ ಮೂರ್ನಾಲ್ಕು ತಿಂಗಳ ಕಾಲ ಮನೆ ಇಲ್ಲದೇ ಬದುಕಿದ್ದೇವೆ. ಆರು ತಿಂಗಳ ನಂತರ ನನಗೆ ಈ ಬಂಗಲೆ ಸಿಕ್ಕಿತು. ಜನರು ಇತರರನ್ನು ಅವಮಾನಿಸಲು ಈ ಕೆಲಸಗಳನ್ನು ಮಾಡುತ್ತಾರೆ. ಈ ಧೋರಣೆಯನ್ನು ನಾನು ಖಂಡಿಸುತ್ತೇನೆ' ಎಂದರು.

ಕಳೆದ ವಾರ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭೆಯ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಅದಾದ ನಂತರ, ಏಪ್ರಿಲ್ 22 ರೊಳಗೆ ಅವರಿಗೆ ನೀಡಲಾಗಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೋಮವಾರ ಸೂಚಿಸಲಾಯಿತು.

ಲೋಕಸಭೆಯ ವಸತಿ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿತು ಮತ್ತು ಸದನದ ಕಾರ್ಯದರ್ಶಿಯ ನಿರ್ದೇಶನದ ಮೇರೆಗೆ 2005 ರಿಂದ 12, ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿರುವ ಝಡ್ ಪ್ಲಸ್ ಭದ್ರತೆಯ ಮಾಜಿ ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT