ಪ್ರಧಾನಿ ಮೋದಿ 
ದೇಶ

ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೆಡೆ ಸೇರುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಒಟ್ಟಾಗಿ ಬರುತ್ತಿವೆ ಎಂದು ಮಂಗಳವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳು ಆರೋಪಗಳಿಂದ ಅಡ್ಡಿಯಾಗದಂತೆ ಭ್ರಷ್ಟಾಚಾರ ಮಟ್ಟಹಾಕುವುದು ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಒಟ್ಟಾಗಿ ಬರುತ್ತಿವೆ ಎಂದು ಮಂಗಳವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳು ಆರೋಪಗಳಿಂದ ಅಡ್ಡಿಯಾಗದಂತೆ ಭ್ರಷ್ಟಾಚಾರ ಮಟ್ಟಹಾಕುವುದು ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ವಿಸ್ತರಿತ ಬಿಜೆಪಿ ಪ್ರಧಾನ ಕಚೇರಿ ಉದ್ಘಾಟಿಸಿದ ನಂತರ ಮಾತನಾಡಿದ ಮೋದಿ, ಭಾರತದ ಶಕ್ತಿಯು ಹೊಸ ಎತ್ತರಕ್ಕೆ ಏರುತ್ತಿರುವ ಸಮಯದಲ್ಲಿ, ದೇಶದ ಒಳಗೆ ಮತ್ತು ಹೊರಗೆ  ಭಾರತ ವಿರೋಧಿ ಶಕ್ತಿಗಳು ಕೈಜೋಡಿಸುವುದು ಸಹಜ ಎಂದರು. 

ಕೆಲವು ಪಕ್ಷಗಳು ಭ್ರಷ್ಟಾಚಾರಿ ಬಚಾವೋ ಅಭಿಯಾನ( ಭ್ರಷ್ಟಾಚಾರ ಉಳಿಸಿ ಅಭಿಯಾನ) ಪ್ರಾರಂಭಿಸಿವೆ ಎಂದು ಹೇಳುವ ಮೂಲಕ ಇಡಿಯಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. 

#WATCH | Country can progress only when corruption will be stopped. When we will do so much, then some people will be upset and will be angry but the action against corruption won't be stopped because of their (Opposition) false allegations: PM Modi pic.twitter.com/6qDE7KJ6JX

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಗೆ ಅನರ್ಹಗೊಳಿಸಿರುವುದು ಕೂಡ ಪ್ರತಿಪಕ್ಷಗಳಿಗೆ ರ‍್ಯಾಲಿಯ ವಿಷಯವಾಗಿ ಪರಿಣಮಿಸಿದೆ. ಸುಳ್ಳು ಆರೋಪಗಳಿಂದ ದೇಶ ಬಗ್ಗುವುದಿಲ್ಲ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ನಿಲ್ಲುವುದಿಲ್ಲ ಎಂದು ಮೋದಿ ಹೇಳಿದರು.

ಭಾರತ ವಿರೋಧಿ ಶಕ್ತಿಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿವೆ. ದೇಶದ ಬೆಳವಣಿಗೆಯನ್ನು ತಡೆಯಲು, ಅದರ ಅಡಿಪಾಯದ ಮೇಲೆ ದಾಳಿ ಮಾಡುತ್ತಿದ್ದಾರೆ ಮತ್ತು ನ್ಯಾಯಾಂಗ ಮತ್ತು ತನಿಖಾ ಸಂಸ್ಥೆಗಳಂತಹ ಸಂಸ್ಥೆಗಳನ್ನು ದೂಷಿಸುವ ಮತ್ತು ಅವರ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪಿತೂರಿಗಳಲ್ಲಿ ತೊಡಗಿದ್ದಾರೆ ಎಂದು ಅವರು ಆರೋಪಿಸಿದರು. 

ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿರುವಾಗ ಅವರನ್ನು ಗುರಿಯಾಗಿಸಲಾಗುತ್ತದೆ ಮತ್ತು ನ್ಯಾಯಾಲಯಗಳು ಈ ಶಕ್ತಿಗಳಿಗೆ ಇಷ್ಟವಾಗದ ತೀರ್ಪು ನೀಡಿದಾಗ ಅವರನ್ನು ಪ್ರಶ್ನಿಸಲಾಗುತ್ತದೆ. ಭ್ರಷ್ಟಾಚಾರದ ವಿರುದ್ಧ ನಾವು ಇಷ್ಟೆಲ್ಲಾ ಕ್ರಮಕೈಗೊಳ್ಳುವಾಗ ಕೆಲವರು ಕೋಪಗೊಳ್ಳುವುದು ನಿಶ್ಚಿತ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಭಾರತೀಯ ಸೇನೆಗೆ ಒಂದು ಲಕ್ಷ 9 MM ಪಿಸ್ತೂಲ್‌ ಖರೀದಿ

SCROLL FOR NEXT