ಸಂಗ್ರಹ ಚಿತ್ರ 
ದೇಶ

ಅದಾನಿ ಜೊತೆ ರಾಬರ್ಟ್ ವಾದ್ರಾ? ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ

ಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ನವವದೆಹಲಿ: ಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ನಡೆಸಿದ್ದು, ಗೌತಮ್ ಅದಾನಿ ಜೊತೆಗಿನ ರಾಬರ್ಟ್ ವಾದ್ರಾ ಅವರ ಹಳೆಯ ಫೋಟೋವನ್ನು ಬಹಿರಂಗಪಡಿಸಿರುವ ಸ್ಮೃತಿ ಇರಾನಿ ಇದು ಏನೆಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮುಂದುವರಿದಿರುವಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿಯೊಂದಿಗೆ 2009ರಲ್ಲಿ ತೆಗೆಸಿಕೊಂಡಿರುವ ಫೋಟೋವನ್ನು ಉಲ್ಲೇಖಿಸಿದ ಸ್ಮೃತಿ ಇರಾನಿ, ವಾದ್ರಾ ಅವರು ಅದಾನಿಯೊಂದಿಗೆ ಹಸ್ತಲಾಘವ ಮಾಡುತ್ತಿರುವುದು ಏಕೆ? ರಾಹುಲ್ ಗಾಂಧಿಗೆ ಅದಾನಿಯೊಂದಿಗೆ ಇಷ್ಟು ಅಸಮಾಧಾನವಿದ್ದರೆ ರಾಬರ್ಟ್ ವಾದ್ರಾ ಯಾಕೆ ಅದಾನಿ ಜೊತೆ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ದ್ವೇಷ ಅವರ ಬ್ರಿಟನ್ ಪ್ರವಾಸದಲ್ಲಿ ಗೋಚರಿಸಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಇಡೀ ಒಬಿಸಿ ಸಮುದಾಯದ ಮೇಲೆ ದಾಳಿ ಮಾಡುವುದು ಅವರ ಹಕ್ಕು ಎಂದು ಭಾವಿಸಿದ್ದರು. ಪ್ರಧಾನಿ ಮೋದಿ ಶಕ್ತಿ ಮತ್ತು ಅವರ ಇಮೇಜ್ ಅನ್ನು ಹಾಳುಮಾಡಲು ರಾಹುಲ್ ಗಾಂಧಿ 2019ರಿಂದ ಆರಂಭಿಸಿದ್ದಾರೆ. ಇದು ಗಾಂಧಿ ಕುಟುಂಬದ ಮೊದಲ ದಾಳಿಯಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ರಾಜಕೀಯ ಹತಾಶೆಯಲ್ಲಿ ರಾಹುಲ್ ಗಾಂಧಿ ಅವರ ಬ್ರಿಟನ್ ಪ್ರವಾಸದ ಸಮಯದಲ್ಲಿ ನರೇಂದ್ರ ಮೋದಿಯವರ ಮೇಲಿನ ದ್ವೇಷವು ಹೊರಬಂದಿತ್ತು ಎಂದು ಸ್ಮೃತಿ ಇರಾನಿ ಹೇಳಿದರು, 'ಆದಾಗ್ಯೂ, ನರೇಂದ್ರ ಮೋದಿಯ ಮೇಲೆ ದಾಳಿ ಮಾಡುವಾಗ ಅವರು ಇಡೀ ಒಬಿಸಿ ಸಮುದಾಯದ ಮೇಲೆ ದಾಳಿ ಮಾಡಿರುವುದು ತಿಳಿಯಲಿಲ್ಲವೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT