ಉಪಹಾರ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತಿತರರು 
ದೇಶ

ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!

ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು. 

ನವದೆಹಲಿ: ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು. 

ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಕೆಲವು ಈಶಾನ್ಯ ರಾಜ್ಯಗಳ ಸಂಸದರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆತಿಥ್ಯ ನೀಡಿದರು. ಉತ್ತರ ಪ್ರದೇಶದ (ಲೋಕಸಭೆ) ರಾಜಸ್ಥಾನ (ಲೋಕಸಭೆ ಮತ್ತು ರಾಜ್ಯಸಭೆ ಎರಡೂ) ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂ ರಾಜ್ಯಗಳ ಸಂಸದರನ್ನು ರಾಷ್ಟ್ರಪತಿಗಳು ಆಹ್ವಾನಿಸಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ಸೋನಿಯಾ ಗಾಂಧಿ ಸೇರಿದಂತೆ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕಾಂಗ್ರೆಸ್ ಸಂಸದರು ಹಾಜರಾಗಿಲ್ಲ.

ಉಪಹಾರ ಸಭೆಗೆ ಗೈರಾದ ಪಕ್ಷದ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ಪ್ರಮೋದ್ ತಿವಾರಿ ಅವರು ಪ್ರತಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಂಡರು. ಸೋನಿಯಾ ಗಾಂಧಿ ಉತ್ತರ ಪ್ರದೇಶದಿಂದ ಕಾಂಗ್ರೆಸ್‌ನಿಂದ ಏಕೈಕ ಲೋಕಸಭಾ ಸಂಸದರಾಗಿದ್ದರೆ, ವಿರೋಧ ಪಕ್ಷ ಆರು ರಾಜ್ಯಸಭಾ ಸಂಸದರನ್ನು ಹೊಂದಿದೆ ಆದರೆ ಯಾರೂ ಇಂದು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಹಾಜರಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ದ್ರೌಪದಿ ಮುರ್ಮು ಅವರು ಉತ್ತರ ಪ್ರದೇಶ, ರಾಜಸ್ಥಾನ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂನ ಸಂಸತ್ ಸದಸ್ಯರಿಗೆ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಉಪಹಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನ ಫೋಟೋವೊಂದನ್ನು ಟ್ವೀಟ್ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT