ಪ್ರಾತಿನಿಧಿಕ ಚಿತ್ರ 
ದೇಶ

ನಟ ನವಾಜುದ್ದೀನ್ ಸಿದ್ದಿಕಿ, ಅವರ ಮಾಜಿ ಪತ್ನಿ, ಇಬ್ಬರು ಅಪ್ರಾಪ್ತ ಮಕ್ಕಳಿಗೆ ನ್ಯಾಯಾಲಯದೆದುರು ಹಾಜರಾಗುವಂತೆ ಹೈಕೋರ್ಟ್ ಸೂಚನೆ

ಬಾಂಬೆ ಹೈಕೋರ್ಟ್ ಗುರುವಾರ ಮಕ್ಕಳ ಸಲುವಾಗಿ ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಸಾಧ್ಯತೆಯನ್ನು ಅನ್ವೇಷಿಸಲು ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಮಾಜಿ ಪತ್ನಿ ಜೈನಾಬ್ ಸಿದ್ದಿಕಿ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಏಪ್ರಿಲ್ 3 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಮುಂಬೈ: ಬಾಂಬೆ ಹೈಕೋರ್ಟ್ ಗುರುವಾರ ಮಕ್ಕಳ ಸಲುವಾಗಿ ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಸಾಧ್ಯತೆಯನ್ನು ಅನ್ವೇಷಿಸಲು ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಮಾಜಿ ಪತ್ನಿ ಜೈನಾಬ್ ಸಿದ್ದಿಕಿ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಏಪ್ರಿಲ್ 3 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಶರ್ಮಿಳಾ ದೇಶಮುಖ್ ಅವರನ್ನೊಳಗೊಂಡ ವಿಭಾಗೀಯ ಪೀಠವು, 12 ವರ್ಷದ ಮಗಳು ಮತ್ತು 7 ವರ್ಷ ವಯಸ್ಸಿನ ಮಗ ಎಲ್ಲಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ತನ್ನ ಮಾಜಿ ಪತ್ನಿಗೆ ನಿರ್ದೇಶನ ನೀಡುವಂತೆ ಕೋರಿ ನಟ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸುತ್ತಿದೆ.

'ತನಗೆ ತಿಳಿಸದೆ ತನ್ನ ಹೆಂಡತಿ ಮಕ್ಕಳನ್ನು ದುಬೈನಿಂದ ಭಾರತಕ್ಕೆ ಕರೆತಂದಿದ್ದಾಳೆ ಮತ್ತು ಅವರು ಶಾಲೆಗೆ ಹೋಗದ ಕಾರಣ ಅವರ ಶಿಕ್ಷಣದ ಮೇಲೆ ಪರಿಣಾಮ ಉಂಟಾಗುತ್ತಿದೆ' ಎಂದು ನಟ ದೂರಿದ್ದಾರೆ.

ಗುರುವಾರ ಪೀಠವು, ನಟ ಹಾಗೂ ಅವರ ಮಾಜಿ ಪತ್ನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಕ್ಯಾಮೆರಾದಲ್ಲಿ ವಿಚಾರಣೆಗಾಗಿ ನ್ಯಾಯಾಧೀಶರ ಕೊಠಡಿಯಲ್ಲಿ ಏಪ್ರಿಲ್ 3 ರಂದು ಹಾಜರಾಗುವಂತೆ ಕೇಳಿದೆ.

'ನಾವು ಮಕ್ಕಳ ಬಗ್ಗೆ ಕಾಳಜಿ ವಹಿಸುತ್ತೇವೆ. ಸೌಹಾರ್ದಯುತ ಇತ್ಯರ್ಥದ ಸಾಧ್ಯತೆಯನ್ನು ಅನ್ವೇಷಿಸೋಣ' ಎಂದು ನ್ಯಾಯಾಲಯ ಹೇಳಿದೆ.

ನವಾಜುದ್ದೀನ್ ಸಿದ್ದಿಕಿ ಅವರ ವಕೀಲ ಅದ್ನಾನ್ ಶೇಖ್ ಅವರು, ಈ ಹಿಂದೆ ಹೈಕೋರ್ಟ್ ನಿರ್ದೇಶನದಂತೆ ನಾವು ಪ್ರಸ್ತಾವಿತ ಒಪ್ಪಿಗೆಯ ನಿಯಮಗಳನ್ನು ಕಳುಹಿಸಿದ್ದೇವೆ. ಆರು ದಿನ ಕಳೆದರೂ ಉತ್ತರ ಬಂದಿಲ್ಲ. ಈ ವಿಷಯವನ್ನು ಇತ್ಯರ್ಥಪಡಿಸಲು ಅವರು ಬಯಸದಿರಬಹುದು ಎಂದು ಪೀಠಕ್ಕೆ ತಿಳಿಸಿದರು.

ಜೈನಾಬ್ ಪರವಾಗಿ ವಾದ ಮಂಡಿಸಿದ ವಕೀಲ ಚೈತನ್ಯ ಪುರಂಕರ್, ಜೈನಾಬ್ ಅವರು ಕೂಡ ಈ ವಿಷಯವನ್ನು ಇತ್ಯರ್ಥಪಡಿಸಲು ಬಯಸುತ್ತಾರೆ ಎಂದು ವಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT