ಸಫ್ದರ್‌ಜಂಗ್ ಆಸ್ಪತ್ರೆ 
ದೇಶ

ಸಫ್ದರ್‌ಜಂಗ್ ಆಸ್ಪತ್ರೆಯ ನ್ಯೂರೋಸರ್ಜನ್ ಸೇರಿ ಐವರನ್ನು ಬಂಧಿಸಿದ ಸಿಬಿಐ!

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ ಮೇಲೆ ಸಿಬಿಐ ಗುರುವಾರ ದಾಳಿ ನಡೆಸಿದೆ. ಕೆಲವು ಮಧ್ಯವರ್ತಿಗಳು ಮತ್ತು ಭ್ರಷ್ಟ ಅಭ್ಯಾಸಗಳಲ್ಲಿ ತೊಡಗಿರುವ ವೈದ್ಯರನ್ನು ಹಿಡಿಯಲು ಈ ದಾಳಿಗಳನ್ನು ನಡೆಸಲಾಯಿತು.

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ ಮೇಲೆ ಸಿಬಿಐ ಗುರುವಾರ ದಾಳಿ ನಡೆಸಿದೆ. ಕೆಲವು ಮಧ್ಯವರ್ತಿಗಳು ಮತ್ತು ಭ್ರಷ್ಟ ಅಭ್ಯಾಸಗಳಲ್ಲಿ ತೊಡಗಿರುವ ವೈದ್ಯರನ್ನು ಹಿಡಿಯಲು ಈ ದಾಳಿಗಳನ್ನು ನಡೆಸಲಾಯಿತು. 

ದಾಳಿ ವೇಳೆ ಸಿಬಿಐ ಕೆಲವು ಇನ್‌ಕ್ರಿಮೆಂಟ್‌ ದಾಖಲೆಗಳನ್ನು ವಶಪಡಿಸಿಕೊಂಡಿದೆ. ದಾಳಿಯ ನಂತರ, ಸಿಬಿಐ ತಂಡವು ಆಪರೇಷನ್ ಥಿಯೇಟರ್‌ನಿಂದ ನ್ಯೂರೋ ಸರ್ಜರಿ ವಿಭಾಗದ ಡಾ.ಮನೀಷ್ ರಾವತ್ ಅವರನ್ನು ಬಂಧಿಸಿತು. ಇದೇ ವೇಳೆ ಈ ಪ್ರಕರಣದಲ್ಲಿ ಇತರ ನಾಲ್ವರನ್ನು ಸಹ ಬಂಧಿಸಲಾಗಿದೆ.

ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯರು ಮತ್ತು ಮಧ್ಯವರ್ತಿ ನಡುವಿನ ಸಂಬಂಧದ ಬಗ್ಗೆ ಸಿಬಿಐಗೆ ಮಾಹಿತಿ ಸಿಕ್ಕಿದ್ದು, ಅದನ್ನು ಬಯಲಿಗೆಳೆಯಲು ಸಿಬಿಐ ದೆಹಲಿಯ ಮೇಲೆ ದಾಳಿ ನಡೆಸಿತು. ನರಶಸ್ತ್ರಚಿಕಿತ್ಸಾ ವಿಭಾಗದ ವೈದ್ಯರು ಮತ್ತು ಮಧ್ಯವರ್ತಿಗಳು ಸೇರಿದಂತೆ ಕೆಲವರನ್ನು ಏಜೆನ್ಸಿ ವಶಕ್ಕೆ ತೆಗೆದುಕೊಂಡಿದೆ. ಸ್ಥಳದಿಂದ ಸಿಬಿಐ ಕೆಲವು ಇನ್‌ಕ್ರಿಮೆಂಟ್ ದಾಖಲೆಗಳನ್ನು ಪಡೆದುಕೊಂಡಿದೆ. ಈ ವಿಷಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು ಎಂದು ಅಧಿಕಾರಿ ಹೇಳಿದರು. ಸಿಬಿಐ ಡಾ.ಮನೀಷ್ ರಾವತ್ ಅವರನ್ನು ಬಂಧಿಸಿ ವಿಚಾರಣೆ ಆರಂಭಿಸಿದೆ.

ಸಿಬಿಐ ಅಧಿಕಾರಿಯೊಬ್ಬರ ಪ್ರಕಾರ, "ವೈದ್ಯರು ಮತ್ತು ಮಧ್ಯವರ್ತಿಗಳ ವಿರುದ್ಧ ಸಂಸ್ಥೆಯು ಹಲವಾರು ದೂರುಗಳನ್ನು ಸ್ವೀಕರಿಸಿತ್ತು. ಅದರ ನಂತರ ವೈದ್ಯರು ಮತ್ತು ಮಧ್ಯವರ್ತಿಗಳ ನಡುವಿನ ಸಂಬಂಧವನ್ನು ಬಹಿರಂಗಪಡಿಸಲು ಬುಧವಾರ ಸಂಜೆ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಈ ದಾಳಿಯಲ್ಲಿ ಸಿಬಿಐಗೆ ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ ಎಂದರು.

ಆರೋಪಿಗಳು ರೋಗಿಗಳನ್ನು ನಿರ್ದಿಷ್ಟ ಸಂಸ್ಥೆಯಿಂದ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ದುಬಾರಿ ಬೆಲೆಗೆ ಖರೀದಿಸುವಂತೆ ಒತ್ತಾಯಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!